Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟಾರ್ಗಳಿಲ್ಲದೆ ಚಿತ್ರ ಗೆಲ್ಲುತ್ತದೆ ಎಂಬುದಕ್ಕೆ 'ಮೊಟ್ಟೆ ಕಥೆ' ಸಾಕ್ಷಿ: ರಾಜೇಂದ್ರ ಸಿಂಗ್ ಬಾಬು
ಚಲನಚಿತ್ರ ಅಕಾಡೆಮಿ ಕನ್ನಡದ ಯಶಸ್ವಿ ಚಿತ್ರಗಳ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮಗಳನ್ನು ಕೂಡ ಮಾಡುತ್ತಿದೆ. ಇತ್ತೀಚೆಗೆ ಪವನ್ ಕುಮಾರ್ ನಿರ್ಮಾಣದ, ರಾಜ್ ಬಿ ಶೆಟ್ಟಿ ನಿರ್ದೇಶನದ 'ಒಂದು ಮೊಟ್ಟೆಯ ಕಥೆ' ಚಿತ್ರವನ್ನು ಚಲನಚಿತ್ರ ಆಕಾಡೆಮಿ ವತಿಯಿಂದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಪ್ರದರ್ಶಿಸಿ ಸಂವಾದ ಕಾರ್ಯಕ್ರಮವನ್ನು ನಡೆಸಿತು.
'ಒಂದು ಮೊಟ್ಟೆಯ ಕಥೆ' ಚಿತ್ರ ಪ್ರದರ್ಶನ ನಂತರ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ರಾಜೇಂದ್ರ ಸಿಂಗ್ ಬಾಬು ರವರು ಪಾಲ್ಗೊಂಡಿದ್ದರು. ಅವರು ಚಿತ್ರ ನೋಡಿದ ಸಂತೋಷವನ್ನು ಹಂಚಿಕೊಂಡು, 'ಸ್ಟಾರ್ ನಟರ ಹೊರತಾಗಿಯೂ ಒಳ್ಳೆಯ ಕಥೆಗಳಿರುವ ಸಿನಿಮಾಗಳು ಗೆಲ್ಲುತ್ತವೆ ಎಂಬುದಕ್ಕೆ 'ಒಂದು ಮೊಟ್ಟೆಯ ಕಥೆ' ಚಿತ್ರವೇ ಅತ್ಯುತ್ತಮ ಉದಾಹರಣೆ. ಒಳ್ಳೆಯ ಕಥೆ ಇದ್ದಾಗ ನಮಗೆ ಸ್ಟಾರ್ ಗಳು ಬೇಕಿರಲ್ಲ. ಕಥೆಯೇ ಮುಖ್ಯ ಎನ್ನುವುದನ್ನು ಚಿತ್ರೋದ್ಯಮ ಆಗಾಗ ತಿಳಿಸಿಕೊಂಡು ಬಂದಿದೆ' ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್ ರವರು ಮಾತನಾಡಿ 'ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಬೇರೆ ಭಾಷೆಗಳು ಕನ್ನಡವನ್ನು ಆಕ್ರಮಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಕನ್ನಡ ಚಿತ್ರ ರಂಗದಲ್ಲಿ 'ಒಂದು ಮೊಟ್ಟೆಯ ಕಥೆ' ಚಿತ್ರಗಳು ಬರುತ್ತಿರುವುದು ಖುಷಿಯ ಸಂಗತಿ. ಇಂತಹ ಚಿತ್ರಗಳಿಗೆ ಹೆಚ್ಚಿನ ಒತ್ತನ್ನು ಅಕಾಡೆಮಿ ನೀಡುತ್ತಿದೆ' ಎಂದರು.
ವಾರ್ತಾ ಇಲಾಖೆಯ ಉಪನಿರ್ದೇಶಕರಾದ ಹೆಚ್ ಬಿ ದಿನೇಶ್, ಒಂದು ಮೊಟ್ಟೆಯ ಕಥೆ ಚಿತ್ರದ ನಟ, ನಿರ್ದೇಶಕ ರಾಜು ಬಿ ಶೆಟ್ಟಿ, ಚಿತ್ರದ ನಿರ್ಮಾಪಕರು ಮತ್ತು ಚಲನಚಿತ್ರ ನಿರ್ದೇಶಕ ಪವನ್ ಕುಮಾರ್, ಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.