Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದ ಯಾವುದೇ ಸಿನಿಮಾಗೂ 'ಮದಕರಿ' ಕಮ್ಮಿ ಇರೋಲ್ಲ- ರಾಜೇಂದ್ರ ಸಿಂಗ್ ಬಾಬು
ಕನ್ನಡದ ಮತ್ತೊಂದು ಅದ್ದೂರಿ ಸಿನಿಮಾ 'ಗಂಡುಗಲಿ ವೀರ ಮದಕರಿ' ಚಿತ್ರದ ಮುಹೂರ್ತ ನಿನ್ನೆ (ಡಿಸೆಂಬರ್ 2) ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಿನಿಮಾದ ಬಗ್ಗೆ ನಟ ದರ್ಶನ್ ಹಾಗೂ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾತನಾಡಿದ್ದಾರೆ.
ಸಿನಿಮಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ದರ್ಶನ್ ''ಈ ಪಾತ್ರಕ್ಕಾಗಿ ಹಲವು ದಿನಗಳಿಂದ ತಯಾರಿ ಮಾಡಿಕೊಳ್ಳುತ್ತಲೇ ಇದ್ದೇವೆ'' ಎಂದಿದ್ದಾರೆ.
'ಮದಕರಿ ನಾಯಕ' ಚಿತ್ರದುರ್ಗದಲ್ಲಿ ಮುಹೂರ್ತ, ಬೆಂಗಳೂರಿನಲ್ಲಿ ಅಧಿಕೃತ ಲಾಂಚ್ ಕಾರ್ಯಕ್ರಮ
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ''ಮದಕರಿ ನಾಯಕರ ಬಗ್ಗೆ ಸಿನಿಮಾ ಮಾಡಲು ತುಂಬ ಜನ ಪ್ರಯತ್ನ ಪಟ್ಟರು ಆದರೆ ಆಗಿರಲಿಲ್ಲ. ಈಗ ಅದು ಸಾಧ್ಯ ಆಗುತ್ತಿದೆ. ಈ ಸಿನಿಮಾವನ್ನು ದರ್ಶನ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರೇ ಮಾಡಬೇಕು ಅಂತ ಇತ್ತೇನೋ'' ಎಂದರು.
ರಾಕ್ ಲೈನ್ ವೆಂಕಟೇಶ್ ಹೆಸರಿನಲ್ಲಿಯೇ 'ರಾಕ್' ಇದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರಿನಲ್ಲಿಯೇ 'ಚಾಲೆಂಜ್' ಇದೆ. ಈ ಇಬ್ಬರು ಇರುವುದು ನೂರು ಆನೆ ಬಲ ಇದ್ದಂತೆ. ನಮ್ಮ ಸಿನಿಮಾ ಭಾರತದ ಯಾವ ಸಿನಿಮಾಗೂ ಕಡಿಮೆ ಇರುವುದಿಲ್ಲ. ಕನ್ನಡ ಬಾವುಟ ಭಾರತದ ತುಂಬ ಹಾರಿಸುತ್ತೇವೆ. ಅಂತಹ ಸಿನಿಮಾ ಮಾಡುವುದು ನಮ್ಮ ಕೆಲಸ ''ಎಂದು ಸಿನಿಮಾದ ಬಗ್ಗೆ ಭರವಸೆ ವ್ಯಕ್ತಪಡಿಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಹೀಗೊಂದು ಗಾಸಿಪ್: ನಿಜವಾದರೆ ಖುಷಿ ಪಡ್ತೀರಾ.?
ಸದ್ಯ ಚಿತ್ರದುರ್ಗದಲ್ಲಿ ಸಿನಿಮಾದ ಪೂಜೆ ನಡೆದಿದೆ. ಡಿಸೆಂಬರ್ 6 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಸಿನಿಮಾ ಲಾಂಚ್ ಆಗಲಿದೆ.