Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಟ್ಟಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ರಜನಿಕಾಂತ್ ಇಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರಿಬ್ಬರು ಒಟ್ಟಿಗೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಬಹಳ ಅಪರೂಪ. ಇಂತಹ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಗೋವಾ ಚಲನಚಿತ್ರೋತ್ಸವ.
ಹೌದು, ಭಾರತದ ದೇಶದ ಪ್ರತಿಷ್ಠಿತ ಚಲನಚಿತ್ರವೋತ್ಸವಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಕಾರ್ಯಕ್ರಮಕ್ಕೆ ಈ ಇಬ್ಬರು ದಿಗ್ಗಜ ನಟರು ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.
ತಮಿಳಿನ ಈ ಇಬ್ಬರು ನಟರ ಜೊತೆ ನಟಿಸಬೇಕಂತೆ ರಶ್ಮಿಕಾ
ನವೆಂಬರ್ 20 ರಂದು ಈ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮ ನಡಯಲಿದ್ದು, ಇದು 50ನೇ ಆವೃತ್ತಿ ಆಗಿರುವುದು ವಿಶೇಷವಾಗಿದೆ. ಈ ಬಗ್ಗೆ ಖ್ಯಾತ ಚಿತ್ರ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಮಾಹಿತಿ ಮತ್ತು ಪ್ರಸರಣ ಇಲಾಖೆ ಸಚಿವರಾಗಿರುವ ಪ್ರಕಾಶ್ ಜಾವಡೇಕರ್ ಅವರು ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ''ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅತಿಥಿಯಾಗಿ ಬರ್ತಿದ್ದಾರೆ'' ಎಂದು ಪ್ರಕಟಿಸಿದ್ದರು.
ಅಮಿತಾಭ್ ಬಚ್ಚನ್ ಅಂದು ಹೇಳಿದ್ದ ಮಾತನ್ನ ಚಿರಂಜೀವಿ ಕೇಳಲೇ ಇಲ್ಲ
ಇದಕ್ಕೆ ಪ್ರತಿಕ್ರಿಯಿಸಿದ್ದ ರಜನಿಕಾಂತ್, ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದರು. ಗೋವಾ ಚಿತ್ರೋತ್ಸವದಲ್ಲಿ ಭಾರತದಿಂದ ಗುಜರಾತಿ ಸಿನಿಮಾ 'ಹೆಲೋರೆ' ಮತ್ತು ಮಲಯಾಳಂ ಭಾಷೆಯ 'ಉಯಿರೇ' ಎರಡು ಚಿತ್ರಗಳು ವಿದೇಶಿ ವಿಭಾಗದಲ್ಲಿ ಸ್ಪರ್ಧೆ ಮಾಡುತ್ತಿದೆ. ನವೆಂಬರ್ 28ಕ್ಕೆ ಚಿತ್ರೋತ್ಸವದ ಸಮಾರೂಪ ಸಮಾರಂಭ ನಡೆಯಲಿದೆ.