Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಠಾಕ್ರೆಗೆ ಸಂತಾಪ ಸೂಚಿಸಿ ರಜನಿ ಬರೆದ ಪತ್ರ..
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಕೂಡಾ ಮರಾಠ ನಾಯಕ ಬಾಳಾ ಠಾಕ್ರೆ ಅವರ ಹಿಂಬಾಲಕರಲ್ಲಿ ಒಬ್ಬರು. ಬಾಳಾ ಠಾಕ್ರೆ ಅವರ ನಿಧನಕ್ಕೆ ಕಂಬನಿ ಮಿಡಿದ ದೇಶದ ಮಹಾನ್ ತಾರೆಗಳ ಸಾಲಿನಲ್ಲಿ ರಜನಿಕಾಂತ್ ಕೂಡಾ ಸೇರಿದ್ದಾರೆ.
ಬಾಲಿವುಡ್ ದಿಗ್ಗಜರಾದ ಅಮಿತಾಬ್ ಬಚ್ಚನ್, ಲತಾ ಮಂಗೇಶ್ವರ್ ರಂಥ ಮಹಾನ್ ಕಲಾವಿದರೇ ಬಾಳಾ ಠಾಕ್ರೆ ಅಂತಿಮ ದರ್ಶನಕ್ಕೆ ಬಂದ ಮೇಲೆ ಇಡೀ ಬಾಲಿವುಡ್ ಇಂಡಸ್ಟ್ರೀಯೇ ಮಹರಾಷ್ಟ್ರದ ಹುಲಿ ಬಾಳಾ ಸಾಹೇಬ್ ಅವರಿಗೆ ಗೌರವ ಸಲ್ಲಿಸಿದೆ.
ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ಅವರ ನಿಧನಕ್ಕೆ ಸಂತಾಪ ಸೂಚಿಸಿ ಸೂಪರ್ ಸ್ಟಾರ್ ರಜನಿಕಾಂತ್ ಬರೆದ ಪತ್ರ ಇಲ್ಲಿದೆ.
ತಮಿಳರ ಆರಾಧ್ಯ ದೈವವಾಗಿರುವ ಬೆಂಗಳೂರಿನಲ್ಲಿ ಕಂಡೆಕ್ಟರ್ ಆಗಿ ವೃತ್ತಿಜೀವನ ಆರಂಭಿಸಿ ನಂತರ ಸೂಪರ್ ಸ್ಟಾರ್ ಆಗಿ ಬೆಳೆದ ರಜನಿಕಾಂತ್ ಅವರು ಮೂಲತಃ ಮಹಾರಾಷ್ಟ್ರದವರು ಎಂಬುದನ್ನು ಮರೆಯುವಂತಿಲ್ಲ.
ಮಹಾರಾಷ್ಟ್ರದಲ್ಲಿ ಹುಟ್ಟಿದ ರಜನಿಕಾಂತ್ ಅವರ ಮೂಲ ಹೆಸರು ಶಿವಾಜಿ ರಾವ್ ಗಾಯಕ್ವಾಡ್ ಆಗಿದೆ.
ಬಾಳಾ ಠಾಕ್ರೆ ನನ್ನನ್ನು ಸೇರಿದಂತೆ ಎಲ್ಲರಿಗೂ ತಂದೆ ಸಮಾನ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಅಭೂತ ಪೂರ್ವ ಅಂತಿಮ ಯಾತ್ರೆ : ಬಾಳಾ ಠಾಕ್ರೆ ಅವರ ಅಂತಿಮ ಯಾತ್ರೆಯಲ್ಲಿಸುಮಾರು 20 ಲಕ್ಷ ಜನರು ಪ್ರವಾಹೋಪಾದಿಯಲ್ಲಿ ಸಾಗಿದರು. 1 ಲಕ್ಷ ಆಟೋ, 30 ಸಾವಿರ ಟ್ಯಾಕ್ಸಿಗಳು ಸಂಚಾರ ಸ್ಥಗಿತಗೊಳಿಸಿದ್ದು, ಇಡೀ ಮುಂಬೈ ದಾದರ್ ನಲ್ಲಿರುವ ಶಿವಾಜಿ ಪಾರ್ಕಿನಲ್ಲಿ ನಲ್ಲಿ ನೆರೆದ್ದಿತ್ತು. ನಿಗದಿತ ಸಮಯಕ್ಕೆ ಸರ್ಕಾರಿ ಗೌರವದ ನಡುವೆ, ಹಿಂದೂ ಸಂಪ್ರದಾಯದ ಪ್ರ್ರಕಾರ ಬಾಳಾ ಠಾಕ್ರೆ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಒನ್ ಇಂಡಿಯಾ ಕನ್ನಡ