Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಕುಚಿಕು ಗೆಳೆಯನ 'ಒನ್ ವೇ' ರೆಡಿ
ಸೂಪರ್ ಸ್ಟಾರ್ ರಜನಿಕಾಂತ್ ಅವರ ತ್ರಿಡಿ 'ಕೊಚಡಿಯಾನ್' ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಅವರ ಕುಚಿಕು ಗೆಳೆಯ ರಾಜ್ ಬಹದ್ದೂರ್ ಅವರ 'ಒನ್ ವೇ' ಚಿತ್ರವೂ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವನ್ನು ತಮಿಳು ಭಾಷೆಯಲ್ಲೂ ಬಿಡುಗಡೆ ಮಾಡಲಾಗುತ್ತಿರುವುದು ವಿಶೇಷ.
ರಜನಿಕಾಂತ್ ಹಾಗೂ ಅವರ ಜೀವದ ಗೆಳೆಯ ರಾಜ್ ಬಹದ್ದೂರ್ ಅವರ ಸ್ನೇಹ ಸಂಬಂಧದ ಎಳೆಯನ್ನು ಈ ಚಿತ್ರ ಒಳಗೊಂಡಿದೆ. ರಜನಿಕಾಂತ್ ಅವರು ಬಲು ಎತ್ತರಕ್ಕೆ ಏರಿದರೂ ಈ ಕುಚಿಕು ಕುಚೇಲನನ್ನು ಮಾತ್ರ ಮರೆಯಲಿಲ್ಲ. ಅವರಿಬ್ಬರ ಸ್ನೇಹಸಂಬಂಧಕ್ಕೆ ಹಣ, ಅಂತಸ್ತು, ಐಶ್ವರ್ಯ ಅಡ್ಡಿಬರಲಿಲ್ಲ. [ಕನ್ನಡಕ್ಕೆ 'ಒನ್ ವೇ'ಯಲ್ಲಿ ಬರಲಿರುವ ರಜನಿಕಾಂತ್]
ರಜನಿಕಾಂತ್ ಅವರ ಹೆಸರಿನ ಜನಪ್ರಿಯತೆಯ ಲಾಭ ಪಡೆಯಲು ತಾವು ಈ ಚಿತ್ರವನ್ನು ತೆಗೆಯುತ್ತಿಲ್ಲ ಎನ್ನುತ್ತಾರೆ ರಾಜ್. ರಾಜ್ ಬಹದ್ದೂರ್ ಅವರು ತಮ್ಮ ಪಾತ್ರವನ್ನು ಅವರೇ ಮಾಡಿದ್ದಾರೆ. ಆದರೆ ಚಿತ್ರದಲ್ಲಿ ರಜನಿಕಾಂತ್ ಪಾತ್ರವನ್ನು ಯಾರು ಮಾಡಿದ್ದಾರೆ ಎಂಬುದು ಗೊತ್ತಾಗಬೇಕಾದರೆ ನೀವು ಚಿತ್ರ ನೋಡಲೇಬೇಕು ಎನ್ನುತ್ತಾರೆ.
ಕನ್ನಡ 'ಒನ್ ವೇ' ಚಿತ್ರಕ್ಕೆ ತಮಿಳಿನಲ್ಲಿ 'ಒರು ವಾಜಿ ಸಲಾಯ್' ಎಂಬ ಹೆಸರಿಡಲಾಗಿದೆ. 'ಕೊಟ್ಲಲ್ಲಪ್ಪೋ ಕೈ' ಚಿತ್ರದ ಋಷಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರ ಶೀಘ್ರದಲ್ಲೇ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರ ಹೇಗೆಲ್ಲಾ ಮೂಡಿಬಂದಿರಬಹುದು ಎಂಬ ಕುತೂಹಲ ರಜನಿಕಾಂತ್ ಅವರಿಗೂ ಇದೆಯಂತೆ. ಹಾಗಾಗಿ ಅವರೂ ರಾಜ್ ಜೊತೆ ಕೂತು ಸಿನಿಮಾ ನೋಡಲಿದ್ದಾರಂತೆ. (ಏಜೆನ್ಸೀಸ್)