ಕನ್ನಡದಲ್ಲೇ ಮಾತನಾಡಿದ ರಜನಿ : 'ಕಾಲಾ' ಬಿಡುಗಡೆಗೆ ಮನವಿ
Recommended Video

ನಾಳೆ ದೇಶದಾದ್ಯಂತ ಬಿಡುಗಡೆ ಆಗಬೇಕಿರುವ 'ಕಾಲಾ' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕನ್ನಡ ಪರ ಹೋರಾಟಗಾರರು ನಿರ್ಧಾರ ಮಾಡಿದ್ದಾರೆ. ಕಾವೇರಿ ವಿಚಾರವಾಗಿ ರಜನಿಕಾಂತ್ ನೀಡಿರುವ ಹೇಳಿಕೆಯನ್ನು ಖಂಡಿಸಿ ಕನ್ನಡಿಗರು ಸಿನಿಮಾವನ್ನ ರಿಲೀಸ್ ಮಾಡಬಾರದು ಎಂದು ಮುಖ್ಯಮಂತ್ರಿಗಳಿಗೆ ಸೇರಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೂ ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಕರ್ನಾಟಕ ಹೈಕೋರ್ಟ್ ಸಿನಿಮಾ ಬಿಡುಗಡೆ ಸಮಯದಲ್ಲಿ ಡಿಐಜಿ, ಐಜಿಪಿಗಳು ಭದ್ರತೆಯ ಮೇಲುಸ್ತುವಾರಿ ವಹಿಸಬೇಕು ಎಂದಿದೆ. ಅಲ್ಲದೆ ಚಿತ್ರತಂಡವು ಚಿತ್ರ ಪ್ರದರ್ಶನದ ವಿವರಗಳನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ಸೂಚಿಸಿದೆ.

ಇದೇ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ರಜನಿಕಾಂತ್ ಕರ್ನಾಟಕ ವಾಣಿಜ್ಯ ಮಂಡಳಿ ಸಿನಿಮಾವನ್ನು ಬಿಡುಗಡೆ ಮಾಡಲು ವಿರೋಧ ವ್ಯಕ್ತ ಪಡಿಸುತ್ತಿರುವುದು ಆಶ್ಚರ್ಯ ತಂದಿದೆ. ಆದರೆ ಕುಮಾರಸ್ವಾಮಿ ಅವರ ಮೇಲೆ ನಂಬಿಕೆ ಇದೆ ಎಂದಿದ್ದಾರೆ. ಅದಷ್ಟೇ ಅಲ್ಲದೆ ಕನ್ನಡದಲ್ಲೇ ಮಾತನಾಡಿದ ರಜನಿಕಾಂತ್ ಕರ್ನಾಟಕದ ಸಹೋದರ ಸಹೋದರಿಯರೇ ನಾನು ಯಾವುದೇ ತಪ್ಪು ಮಾಡಿಲ್ಲ.
"ಸುಪ್ರೀಂ ಕೋರ್ಟ್ ಏನು ಹೇಳಿತ್ತು ಅದನ್ನೇ ನಾನು ಹೇಳಿದ್ದೇನೆ. ಯಾರೆಲ್ಲಾ ಸಿನಿಮಾವನ್ನ ನೋಡಬೇಕು ಅಂತಿದ್ದಾರೋ ಅದಕ್ಕೆ ಅವಕಾಶ ಮಾಡಿಕೊಡಿ. ಸಿನಿಮಾ ಬಿಡುಗಡೆ ಮಾಡಲು ಯಾವುದೇ ತೊಂದರೆ ಕೊಡಬೇಡಿ ಎಂದು ನಾನು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ" ಎಂದಿದ್ದಾರೆ.


Click it and Unblock the Notifications











