Don't Miss!
- News Congress Candidates List : ಕಾಂಗ್ರೆಸ್ 2 ನೇ ಲಿಸ್ಟ್ ಗೆ ಕೌಂಟ್ ಡೌನ್ : ಯಾರ್ಯಾರಿಗೆ 'ಕೈ' ಟಿಕೆಟ್?
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಕ್ಲೋನ್ ಗೆ ತುತ್ತಾಗಿದ್ದ 10 ಕುಟುಂಬಗಳಿಗೆ ಮನೆ ಕಟ್ಟಿಸಿಕೊಟ್ಟ ರಜನಿಕಾಂತ್
Recommended Video
ಸೈಕ್ಲೋನ್ ಗೆ ಗುತ್ತಾಗಿದ್ದ ಹತ್ತು ಕುಟುಂಬಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು, ಹೊಸದಾಗಿ ಮನೆಗಳನ್ನ ಕಟ್ಟಿಸಿಕೊಟ್ಟಿದ್ದಾರೆ. ಇಂದು ಆ ಮನೆಯ ಬೀಗಗಳನ್ನ ನೆರೆ ಸಂತ್ರಸ್ಥರಿಗೆ ನೀಡುವ ಮೂಲಕ ನೆರವಾಗಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ವತಿಯಿಂದ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ, ವಾಸಿಸಲು ಯೋಗ್ಯವಾದ ಮನೆಯ ನಿರ್ಮಿಸಲಾಗಿದೆ. ಈಗ ಆ ಮನೆಯನ್ನ ಜನರಿಗೆ ಹಸ್ತಾಂತರಿಸಲಾಗಿದೆ.
ಕಳೆದ ವರ್ಷ ನಾಗಪಟ್ಟಣಂ ಜಿಲ್ಲೆಯಲ್ಲಿ ಎದುರಾಗಿದ್ದ ಸೈಕ್ಲೋನ್ ನಲ್ಲಿ ಹಲವರು ಮನೆ ಕಳೆದುಕೊಂಡಿದ್ದರು. ಆ ಜನರಿಗೆ ರಜನಿಕಾಂತ್ ಅವರು ಮನೆ ನಿರ್ಮಿಸಿ ಕೊಡುವುದಾಗಿ ಘೋಷಿಸಿದ್ದರು.
ಹೀರೋ ಮಾಡಿದ ನಿರ್ಮಾಪಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸೂಪರ್ ಸ್ಟಾರ್
ಒಂದು ಮನೆಯನ್ನು ನಿರ್ಮಿಸಲು ಸುಮಾರು 1.85 ಲಕ್ಷ ಖರ್ಚು ಆಗಿದೆ ಎಂದು ಹೇಳಲಾಗಿದೆ. ಸದ್ಯಕ್ಕೆ ಹತ್ತು ಮನೆಯನ್ನ ನಿರ್ಮಿಸಲಾಗಿದೆ.
'ಮಾಡಿದ ತಪ್ಪು ಅರಿವಾಯಿತು': ರಜನಿ, ಕಮಲ್ ಆ ತಪ್ಪು ಮಾಡುವುದು ಬೇಡ
ಸೈಕ್ಲೋನ್ ನಲ್ಲಿ ಸುಮಾರು 50 ಜನರ ಮೃತಪಟ್ಟಿದ್ದರು. ಹಾಗೆ, ಅನೇಕ ಮಂದಿ ಮನೆಯನ್ನ ಕಳೆದುಕೊಂಡು, ಬೀದಿಗೆ ಬಂದಿದ್ದರು. ಮನೆಯನ್ನ ನಿರ್ಮಿಸುವುದರ ಜೊತೆಗೆ, ಆ ನಗರವನ್ನ ಮತ್ತೆ ಮೊದಲಿನಂತೆ ಮಾಡಲು ರಜನಿ ಮಕ್ಕಳ್ ಮಂದ್ರಮ್ ಸಹಕಾರಿಯಾಗಿದೆ.
ರಜನಿಕಾಂತ್ ಅವರ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿಲ್ಲ. ಮುಂದಿನ ಚುನಾವಣೆ ವೇಳೆ ಪಕ್ಷ ಘೋಷಿಸಿ, ಸ್ಪರ್ಧೆ ಮಾಡುವುದರ ಬಗ್ಗೆ ಮಾಹಿತಿ ನೀಡಬಹುದು ಎಂಬ ನಿರೀಕ್ಷೆ ಇದೆ.