Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳಿಗೆ ರಜನಿಕಾಂತ್ ಪತ್ರ ಬರೆದಿದ್ದಾರೆ, ಓದಿ
ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಿಂದ ಈ ವಾರದ ಆರಂಭದಲ್ಲಿ ಬಿಡುಗೊಡೆಗೊಂಡಿದ್ದರು. ಈಗ ಸಿಂಗಪುರದಲ್ಲಿ ರೆಸ್ಟ್ ಪಡೆಯುತ್ತಿದ್ದಾರೆ. ಅಲ್ಲಿಂದಲೇ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.
"ನಿಮ್ಮ ಪ್ರೀತಿಯೇ ನಾನು ಚೇತರಿಸಿಕೊಳ್ಳಲು ಕಾರಣ ಮತ್ತು ನಿಮ್ಮ ಪ್ರೀತಿಯನ್ನು ಎಂದಿಗೂ ಮರೆಯಲಾರೆ. ಅದು ನನ್ನ ಹೃದಯದಲ್ಲಿ ಚಿರಸ್ಥಾಹಿ. ಈಗ ನನ್ನ ಒಂದೇ ಗುರಿ ನಿಮಗೆ ಮನರಂಜನೆ ನೀಡುವುದು. ನಿಮ್ಮನ್ನು ರಂಜಿಸಲು ನಾನು "ರಾಣಾ" ಚಿತ್ರದಲ್ಲಿ ಶೀಘ್ರದಲ್ಲಿ ನಿಮ್ಮ ಮುಂದೆ ಬರುತ್ತೇನೆ" ಎಂದು ಪತ್ರದಲ್ಲಿ ಬರೆದಿದ್ದಾರೆ.
ಇಷ್ಟು ದಿನ ಪ್ರತಿಕ್ರಿಯೆ ನೀಡದ ಕುರಿತು ರಜನಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. "ನಿಮಗೆ ಬೇಸರವಾಗಿರಬಹುದು. ನಿಮ್ಮ ಪ್ರೀತಿಯ ಆಳ ನನಗೆ ಗೊತ್ತು. ನನಗೆ ನೀವೇ ಜಗತ್ತು" ಎಂದು ಬರೆದಿದ್ದಾರೆ.
ರಜನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ(ಜೂನ್ 15) ಕುರಿತು ಅವರಳಿಯ ಧನುಶ್ ಟ್ವಿಟ್ ಮಾಡಿ ತಿಳಿಸಿದ್ದರು. ಸಿಂಗಪುರದಿಂದ ಜುಲೈನಲ್ಲಿ ಅವರು ಭಾರತಕ್ಕೆ ಹಿಂತುರುಗುತ್ತಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದ್ದವು. ಏಪ್ರಿಲ್ 29ರ ನಂತರ ರಾಣಾ ಚಿತ್ರದಲ್ಲಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ಹಲವು ಬಾರಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಮೇ 28ರಂದು ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿದ್ದರು.