ಮಂಡ್ಯ ಕೊನೆ ದಿನದ ಪ್ರಚಾರದಲ್ಲಿ ರಜನಿಕಾಂತ್?

Recommended Video

Lok Sabha Elections 2019: ಕೊನೇ ದಿನ ಸುಮಲತಾ ಪರ ಪ್ರಚಾರ ಮಾಡಲು ಮಂಡ್ಯಕ್ಕೆ ಬರಲಿದ್ದಾರಾ ರಜಿನಿಕಾಂತ್?

ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಅದರಲ್ಲೂ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಚುನಾವಣಾ ಅಖಾಡ ಕಾದ ಕಾವಲಿಯಂತಾಗಿದೆ. 18ರಂದು ನಡೆಯುವ ಚುನಾವಣೆ ಹಿನ್ನಲೆ ಬಹಿರಂಗ ಪ್ರಚಾರಕ್ಕೆ ನಾಳೆ ಕೊನೆಯ ದಿನವಾಗಿದ್ದು ಮತದಾರರನ್ನು ಸೆಳೆಯುವ ಅಂತಿಮ ಹಂತದ ಕಸರತ್ತಿನಲ್ಲಿ ಅಭ್ಯರ್ಥಿಗಳು ಬ್ಯುಸಿಯಾಗಿದ್ದಾರೆ.

ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತಯಾಚಿಸಲು ಮಂಡ್ಯ ಕಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇತ್ತ ಸುಮಲತಾ ಪರ ಮತಯಾಚನೆ ಮಾಡಲು ಸೂಪರ್ ಸ್ಟಾರ್ ರಜನಿಕಾಂತ್ ಬರುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.

ಆದ್ರೀಗ ಈ ವಿಚಾರಕ್ಕೆ ಖುದ್ದು ಸುಮಲತಾ ಅವರೇ ಬ್ರೇಕ್ ಹಾಕಿದ್ದಾರೆ. ಮಂಚನಹಳ್ಳಿಯಲ್ಲಿ ಮಾತನಾಡಿದ ಸುಮಲತಾ "ಮಂಡ್ಯ ಪ್ರಚಾರಕ್ಕೆ ಆಗಲಿ ಅಥವಾ ಬಹಿರಂಗ ಸಭೆಗೆ ರಜನಿಕಾಂತ್ ಬರಲ್ಲ. ಪ್ರಚಾರ ವಿಚಾರವಾಗಿ ಅವರನ್ನು ಸಂಪರ್ಕ ಮಾಡಿಲ್ಲ" ಎಂದು ಸುಮಲತಾ ಸ್ಪಷ್ಟಪಡಿಸಿದ್ದಾರೆ.

rajinikanth not campaign for sumalatha in mandya lok sabha election

ಈಗಾಗಲೆ ನಟ ದರ್ಶನ್ ಮತ್ತು ಯಶ್ ಇಬ್ಬರು ಸುಮಲತಾ ಪರ ಮತಯಾಚನೆ ಮಾಡುತ್ತಿದ್ದಾರೆ. ಮತದಾರರನ್ನು ಓಲೈಸಲು ಇಂದು ಮತ್ತು ನಾಳೆ ಎರಡೇ ದಿನಗಳಿದೆ. ನಾಳೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಯಶ್, ದರ್ಶನ್ ಅಭಿಷೇಕ್ ಸೇರಿದಂತೆ ನೂರಾರು ಸಂಖ್ಯೆಯ ಬೆಂಬಲಿಗರು ಭಾಗವಹಿಸಲಿದ್ದಾರೆ.

More from Filmibeat

English summary
tamil superstar rajinikanth not campaign for sumalatha in mandya lok sabha election. sumalatha clarified that rajinikanth not participate in mandya campaign.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X