Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಕೊನೆ ದಿನದ ಪ್ರಚಾರದಲ್ಲಿ ರಜನಿಕಾಂತ್?
Recommended Video
ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಅದರಲ್ಲೂ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಚುನಾವಣಾ ಅಖಾಡ ಕಾದ ಕಾವಲಿಯಂತಾಗಿದೆ. 18ರಂದು ನಡೆಯುವ ಚುನಾವಣೆ ಹಿನ್ನಲೆ ಬಹಿರಂಗ ಪ್ರಚಾರಕ್ಕೆ ನಾಳೆ ಕೊನೆಯ ದಿನವಾಗಿದ್ದು ಮತದಾರರನ್ನು ಸೆಳೆಯುವ ಅಂತಿಮ ಹಂತದ ಕಸರತ್ತಿನಲ್ಲಿ ಅಭ್ಯರ್ಥಿಗಳು ಬ್ಯುಸಿಯಾಗಿದ್ದಾರೆ.
ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತಯಾಚಿಸಲು ಮಂಡ್ಯ ಕಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇತ್ತ ಸುಮಲತಾ ಪರ ಮತಯಾಚನೆ ಮಾಡಲು ಸೂಪರ್ ಸ್ಟಾರ್ ರಜನಿಕಾಂತ್ ಬರುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ಏಪ್ರಿಲ್ 16ಕ್ಕೆ ದರ್ಶನ್ ಮತ್ತು ಯಶ್ ಒಟ್ಟಿಗೆ ಪ್ರಚಾರ
ಆದ್ರೀಗ ಈ ವಿಚಾರಕ್ಕೆ ಖುದ್ದು ಸುಮಲತಾ ಅವರೇ ಬ್ರೇಕ್ ಹಾಕಿದ್ದಾರೆ. ಮಂಚನಹಳ್ಳಿಯಲ್ಲಿ ಮಾತನಾಡಿದ ಸುಮಲತಾ "ಮಂಡ್ಯ ಪ್ರಚಾರಕ್ಕೆ ಆಗಲಿ ಅಥವಾ ಬಹಿರಂಗ ಸಭೆಗೆ ರಜನಿಕಾಂತ್ ಬರಲ್ಲ. ಪ್ರಚಾರ ವಿಚಾರವಾಗಿ ಅವರನ್ನು ಸಂಪರ್ಕ ಮಾಡಿಲ್ಲ" ಎಂದು ಸುಮಲತಾ ಸ್ಪಷ್ಟಪಡಿಸಿದ್ದಾರೆ.
ಈಗಾಗಲೆ ನಟ ದರ್ಶನ್ ಮತ್ತು ಯಶ್ ಇಬ್ಬರು ಸುಮಲತಾ ಪರ ಮತಯಾಚನೆ ಮಾಡುತ್ತಿದ್ದಾರೆ. ಮತದಾರರನ್ನು ಓಲೈಸಲು ಇಂದು ಮತ್ತು ನಾಳೆ ಎರಡೇ ದಿನಗಳಿದೆ. ನಾಳೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಯಶ್, ದರ್ಶನ್ ಅಭಿಷೇಕ್ ಸೇರಿದಂತೆ ನೂರಾರು ಸಂಖ್ಯೆಯ ಬೆಂಬಲಿಗರು ಭಾಗವಹಿಸಲಿದ್ದಾರೆ.