Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಕೊನೆ ದಿನದ ಪ್ರಚಾರದಲ್ಲಿ ರಜನಿಕಾಂತ್?
Recommended Video
ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಅದರಲ್ಲೂ ರಾಜ್ಯದ ಗಮನ ಸೆಳೆದಿರುವ ಮಂಡ್ಯ ಚುನಾವಣಾ ಅಖಾಡ ಕಾದ ಕಾವಲಿಯಂತಾಗಿದೆ. 18ರಂದು ನಡೆಯುವ ಚುನಾವಣೆ ಹಿನ್ನಲೆ ಬಹಿರಂಗ ಪ್ರಚಾರಕ್ಕೆ ನಾಳೆ ಕೊನೆಯ ದಿನವಾಗಿದ್ದು ಮತದಾರರನ್ನು ಸೆಳೆಯುವ ಅಂತಿಮ ಹಂತದ ಕಸರತ್ತಿನಲ್ಲಿ ಅಭ್ಯರ್ಥಿಗಳು ಬ್ಯುಸಿಯಾಗಿದ್ದಾರೆ.
ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತಯಾಚಿಸಲು ಮಂಡ್ಯ ಕಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇತ್ತ ಸುಮಲತಾ ಪರ ಮತಯಾಚನೆ ಮಾಡಲು ಸೂಪರ್ ಸ್ಟಾರ್ ರಜನಿಕಾಂತ್ ಬರುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ಏಪ್ರಿಲ್ 16ಕ್ಕೆ ದರ್ಶನ್ ಮತ್ತು ಯಶ್ ಒಟ್ಟಿಗೆ ಪ್ರಚಾರ
ಆದ್ರೀಗ ಈ ವಿಚಾರಕ್ಕೆ ಖುದ್ದು ಸುಮಲತಾ ಅವರೇ ಬ್ರೇಕ್ ಹಾಕಿದ್ದಾರೆ. ಮಂಚನಹಳ್ಳಿಯಲ್ಲಿ ಮಾತನಾಡಿದ ಸುಮಲತಾ "ಮಂಡ್ಯ ಪ್ರಚಾರಕ್ಕೆ ಆಗಲಿ ಅಥವಾ ಬಹಿರಂಗ ಸಭೆಗೆ ರಜನಿಕಾಂತ್ ಬರಲ್ಲ. ಪ್ರಚಾರ ವಿಚಾರವಾಗಿ ಅವರನ್ನು ಸಂಪರ್ಕ ಮಾಡಿಲ್ಲ" ಎಂದು ಸುಮಲತಾ ಸ್ಪಷ್ಟಪಡಿಸಿದ್ದಾರೆ.
ಈಗಾಗಲೆ ನಟ ದರ್ಶನ್ ಮತ್ತು ಯಶ್ ಇಬ್ಬರು ಸುಮಲತಾ ಪರ ಮತಯಾಚನೆ ಮಾಡುತ್ತಿದ್ದಾರೆ. ಮತದಾರರನ್ನು ಓಲೈಸಲು ಇಂದು ಮತ್ತು ನಾಳೆ ಎರಡೇ ದಿನಗಳಿದೆ. ನಾಳೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಯಶ್, ದರ್ಶನ್ ಅಭಿಷೇಕ್ ಸೇರಿದಂತೆ ನೂರಾರು ಸಂಖ್ಯೆಯ ಬೆಂಬಲಿಗರು ಭಾಗವಹಿಸಲಿದ್ದಾರೆ.