Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮಿತ್ ಶಾ-ಮೋದಿ ಅವರನ್ನ ರಜನಿಕಾಂತ್ ಹೋಲಿಸಿದ್ದು ಯಾರಿಗೆ?
Recommended Video
''ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಂದು ರೀತಿ ಕೃಷ್ಣ ಮತ್ತು ಅರ್ಜುನ ಇದ್ದಂತೆ'' ಎಂದು ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ನಟ-ರಾಜಕಾರಣಿ ರಜನಿಕಾಂತ್, ಜಮ್ಮು ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಜನಿ, ಸಲ್ಲು ಮೀರಿಸಿದ ಪ್ರಭಾಸ್: 'ಸಾಹೋ' ಚಿತ್ರಕ್ಕೆ ಅತಿ ಹೆಚ್ಚು ಸಂಭಾವನೆ.!
''371ನೇ ವಿಧಿ ರದ್ದು ಮಾಡಿದ ನಿಮ್ಮ ಧೈರ್ಯ ಮತ್ತು ಅದನ್ನ ಕಾರ್ಯರೂಪಿಗೊಳಿಸಿದ ನಿಮ್ಮ ಯೋಜನೆ ನಿಜಕ್ಕೂ ಅದ್ಭುತ. ಲೋಕಸಭೆಯಲ್ಲಿ ನಿಮ್ಮ ಭಾಷಣ ಕೂಡ ನೋಡಿದೆ. ತುಂಬಾ ಚೆನ್ನಾಗಿ ಮಾತಾಡಿದ್ರಿ'' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಜನಿ ಹೊಗಳಿದರು.
''ನರೇಂದ್ರ ಮೋದಿ ಮತ್ತು ಅಮಿತ್ ಶಾ ಇಬ್ಬರು ಕೃಷ್ಣಾರ್ಜುನ ಇದ್ದಂತೆ. ಆದರೆ, ಅವರಿಬ್ಬರಲ್ಲಿ ಯಾರು ಕೃಷ್ಣ ಯಾರು ಅರ್ಜುನ ಎಂಬುದು ಗೊತ್ತಿಲ್ಲ. ಅದನ್ನ ಅವರೇ ಹೇಳಬೇಕು'' ಎಂದು ವೇದಿಕೆಯಲ್ಲಿ ಶ್ಲಾಘಿಸಿದರು.
ತಾತ ರಜನಿಕಾಂತ್ ಸ್ಟೈಲ್ ನಲ್ಲಿ ಪೋಸ್ ನೀಡಿದ ಮೊಮ್ಮಗ
ಇನ್ನು ತಮಿಳುನಾಡು ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿರುವ ರಜನಿಕಾಂತ್, ತಮ್ಮದೇ ಸ್ವಂತ ಪಕ್ಷ ಸ್ಥಾಪಿಸಿದ್ದಾರೆ. ತಮಿಳುನಾಡಿನ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಜನಿ ಹೊಸ ಪಕ್ಷದಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.