twitter
    For Quick Alerts
    ALLOW NOTIFICATIONS  
    For Daily Alerts

    ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ

    |

    ತಲೈವಾ ರಜನೀಕಾಂತ್ ಏನೋ ಹೇಳುತ್ತಾರೆ ಎಂದು ಕಾದಿದ್ದ ಅಭಿಮಾನಿಗಳಿಗೆ ಮಿಶ್ರ ಭಾವವನ್ನು ರಜನಿಕಾಂತ್ ನೀಡಿದ್ದಾರೆ.

    ತಮ್ಮ ರಾಜಕೀಯ ಭವಿಷ್ಯ ಸಂಬಂಧಿಸಿದಂತೆ ಮಾತನಾಡಿದ ರಜನಿಕಾಂತ್ ಸಿಹಿ ಸುದ್ದಿಯನ್ನು ನೀಡಿದರಾದರೂ ತಾವು ''ತಮಿಳುನಾಡಿನ ಸಿಎಂ ಆಗುವುದಿಲ್ಲ'' ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

    ಹೌದು, ತಮ್ಮ ರಾಜಕೀಯ ಭವಿಷ್ಯದ ಸುದ್ದಿಯನ್ನು ಖಚಿತಪಡಿಸಿದ ತಲೈವಾ, ತಾವು ತಮಿಳುನಾಡಿನ ಮುಂದಿನ ಸಿಎಂ ಆಗುವ ಆಸೆ ಹೊಂದಿಲ್ಲ ಎಂದರು.

    ಹೈಕಮಾಂಡ್ ಆಗುವ ಸೂಚನೆ ಕೊಟ್ಟ ರಜನಿಕಾಂತ್

    ಹೈಕಮಾಂಡ್ ಆಗುವ ಸೂಚನೆ ಕೊಟ್ಟ ರಜನಿಕಾಂತ್

    ಆದರೆ ಒಬ್ಬ ಪ್ರಮಾಣಿಕ, ವಿದ್ಯಾವಂತ, ವಿಚಾರವಂತ, ಅಭಿವೃದ್ಧಿ ಪರ ವ್ಯಕ್ತಿಯನ್ನು ಸಿಎಂ ಅನ್ನಾಗಿ ಮಾಡುವುದಾಗಿ ರಜನಿಕಾಂತ್ ಹೇಳಿದ್ದಾರೆ. ಆ ಮೂಲಕ ತಾವು 'ಹೈಕಮಾಂಡ್' ಆಗಿರುವುದಾಗಿಯೂ ಸೂಚನೆ ನೀಡಿದ್ದಾರೆ.

    ಹೊಸ ಪಕ್ಷ ಘೋಷಣೆ ಬಗ್ಗೆ ಮಾತಿಲ್ಲ

    ಹೊಸ ಪಕ್ಷ ಘೋಷಣೆ ಬಗ್ಗೆ ಮಾತಿಲ್ಲ

    ಆದರೆ ರಜನಿಕಾಂತ್ ತಮ್ಮ ಹೊಸ ಪಕ್ಷವನ್ನು ಯಾವಾಗ ಘೋಷಿಸುತ್ತಾರೆ. ಹೊಸ ಪಕ್ಷದ ಲಾಂಛನ, ಹೆಸರು ಇದಾವುದರ ಬಗ್ಗೆಯೂ ಗುಟ್ಟು ಬಿಟ್ಟುಕೊಟ್ಟಿಲ್ಲ.

    2017 ರಲ್ಲೇ ರಾಜಕೀಯ ಪ್ರವೇಶ ಘೋಷಿಸಿದ್ದರು

    2017 ರಲ್ಲೇ ರಾಜಕೀಯ ಪ್ರವೇಶ ಘೋಷಿಸಿದ್ದರು

    2017 ರಲ್ಲಿಯೇ ರಜನಿಕಾಂತ್ ಅವರು ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಿಸಿದ್ದರು. ಆದರೆ ಇಂದಿನವರೆಗೆ ಪಕ್ಷದ ಹೆಸರು, ಲಾಂಛನ ಬಿಡುಗಡೆ ಮಾಡಿಲ್ಲ. ಇಂದಿನ ಸುದ್ದಿಗೋಷ್ಠಿಯಲ್ಲಿ ಪಕ್ಷದ ಹೆಸರು ಘೋಷಿಸುತ್ತಾರೆ ಎನ್ನಲಾಗಿತ್ತಾದರೂ ಅದು ಹುಸಿಯಾಗಿದೆ.

    2018 ರಲ್ಲಿ ಪಕ್ಷ ಘೋಷಿಸಿದ್ದ ಕಮಲ್‌ಹಾಸನ್

    2018 ರಲ್ಲಿ ಪಕ್ಷ ಘೋಷಿಸಿದ್ದ ಕಮಲ್‌ಹಾಸನ್

    ತಮಿಳುನಾಡಿನ ಮತ್ತೊಬ್ಬ ಸ್ಟಾರ್ ನಟ ಕಮಲ್‌ಹಾಸನ್, ತಮ್ಮ ರಾಜಕೀಯ ಪಕ್ಷ 'ಮಕ್ಕಳ್ ನಿಧಿ ಮಯಂ' ಅನ್ನು 2018 ರಲ್ಲಿ ಘೋಷಿಸಿದರು. ಕಳೆದ ಲೋಕಸಭಾ ಚುನಾವಣೆಗೆ ತಮಿಳುನಾಡಿನ 39 ಹಾಗೂ ಪುದುಚೆರಿಯ ಒಂದು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಒಂದು ಸ್ಥಾನವನ್ನೂ ಮಕ್ಕಳ್ ನಿಧಿ ಮಯಂ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿಲ್ಲ.

    English summary
    Super star Rajinikanth talked about his politics entry and his party.
    Thursday, March 12, 2020, 14:21
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X