Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಮರ್' ಚಿತ್ರಕ್ಕೆ ಮನಸಾರೆ ಶುಭ ಹಾರೈಸಿದ ರಜನಿಕಾಂತ್
Recommended Video
ನಟ ಅಂಬರೀಶ್ ಪುತ್ರ ಅಭಿಷೇಕ್ ಮೊದಲ ಸಿನಿಮಾ ಶುರು ಆದಾಗಿನಿಂದ, ಆ ಚಿತ್ರದ ಬಿಡುಗಡೆಯವರೆಗೂ ಚಿತ್ರರಂಗದ ಎಲ್ಲ ನಟರು ಅವರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಈಗ ಸೂಪರ್ ಸ್ಟಾರ್ ರಜನಿಕಾಂತ್ ಸಹ 'ಅಮರ್' ಚಿತ್ರಕ್ಕೆ ವಿಶ್ ಮಾಡಿದ್ದಾರೆ.
ವಿಡಿಯೋ ಮೂಲಕ ಶುಭ ಹಾರೈಸಿರುವ ಅವರು ''ನನ್ನ ಆತ್ಮೀಯ ಗೆಳೆಯ ಅಂಬರೀಶ್ ಹಾಗೂ ಸಹೋದರಿ ಸುಮಲತಾ ಅವರ ಪುತ್ರ ಅಭಿಷೇಕ್ ಅಭಿನಯದ 'ಅಮರ್' ಸಿನಿಮಾ ದೊಡ್ಡ ಯಶಸ್ಸು ಗಳಿಸಲಿ. ಅಂಬರೀಶ್ ಹೇಗೆ ಕನ್ನಡ ಜನಗಳ ಹೃದಯದಲ್ಲಿ ಹೇಗೆ ವಿಜೃಂಭಿಸಿದನೋ ಅದೇ ರೀತಿ ಅಭಿಷೇಕ್ ಸಹ ಕನ್ನಡ ಚಿತ್ರರಂಗದಲ್ಲಿ, ಕನ್ನಡ ಜನಗಳ ಹೃದಯಲ್ಲಿಯೂ ವಿಜೃಂಭಿಸಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.'' ಎಂದು ಹೇಳಿದ್ದಾರೆ.
'ಅಮರ್' ಸಿನಿಮಾದ ಒಂದು ಟಿಕೆಟ್ ಗೆ ಒಂದು ಲಕ್ಷ ಕೊಟ್ಟ ಅಂಬಿ ಅಭಿಮಾನಿ
ಅಂಬರೀಶ್ ಮತ್ತು ರಜನಿಕಾಂತ್ ಒಳ್ಳೆಯ ಗೆಳೆಯರು. ಯಾವುದೇ ಪಾತ್ರ ಇದ್ದರೂ 'ಅಮರ್' ಸಿನಿಮಾದಲ್ಲಿ ನಟಿಸುತ್ತೇನೆ ಎಂದು ರಜನಿಕಾಂತ್ ಹೇಳಿದ್ದರಂತೆ. ಆದರೆ, ಚಿತ್ರತಂಡ ಅವರ ಒಳ್ಳೆತನವನ್ನು ಬಳಸಿಕೊಳ್ಳುವುದು ಬೇಡ ಎಂದು ನಿರ್ಧಾರ ಮಾಡಿತಂತೆ.
ಅಂದಹಾಗೆ, 'ಅಮರ್' ಸಿನಿಮಾ ಇದೇ ಶುಕ್ರವಾರ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ. ನಾಗಶೇಖರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸಂದೇಶ್ ನಾಗರಾಜ್ ಬಂಡವಾಳ ಹಾಕಿದ್ದಾರೆ.
ಬೈಕ್ ರೇಸರ್ ಪಾತ್ರದಲ್ಲಿ ಅಭಿಷೇಕ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ತಾನ್ಯ ಹೂಪ್ ಚಿತ್ರದ ನಾಯಕಿ. ನಟ ದರ್ಶನ್ ಹಾಗೂ ರಚಿತಾ ರಾಮ್ ಚಿತ್ರದ ವಿಶೇಷ ಹಾಡಿನಲ್ಲಿ ನಟಿಸಿದ್ದಾರೆ.
ಅರ್ಜುನ್ ಜನ್ಯ ಸಿನಿಮಾಗೆ ಸಂಗೀತ ನೀಡಿದ್ದು, ಹಾಡುಗಳು ಹಿಟ್ ಆಗಿವೆ.