Don't Miss!
- News ಕೋಲಾರ ಟಿಕೆಟ್ ಗಾಗಿ ಫೈಟಿ; ಶಾಸಕರ ರಾಜೀನಾಮೆ ಎಚ್ಚರಿಕೆ - ಡಿಕೆ ಶಿವಕುಮಾರ್ ಏನಂದ್ರು?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Automobiles Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- Finance ಬೆಂಗಳೂರಿನ ರಿಯಲ್ ಎಸ್ಟೇಟ್ ಸಂಸ್ಥೆ ಕಾಂಕಾರ್ಡ್ನಿಂದ 100 ಕೋಟಿಗೆ 4.5 ಎಕರೆ ಭೂಮಿ ಸ್ವಾಧೀನ
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ ಅತ್ತಿಗೆ ನಿಧನ : ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ಬಂದ ನಟ
Recommended Video
ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ (ಸೆಪ್ಟೆಂಬರ್ 3) ಬೆಂಗಳೂರಿಗೆ ಆಗಮಿಸಿದ್ದರು. ಅನೇಕ ಬಾರಿ ಬೆಂಗಳೂರಿಗೆ ಬಂದು ತಮಗಿಷ್ಟವಾಗುವ ರಸ್ತೆಯಲ್ಲಿ ಯಾರಿಗೂ ಗೊತ್ತಾಗದಂತೆ ಸುತ್ತಾಡಿ ಹೋಗುತ್ತಿದ್ದರು ರಜನಿ. ಆದರೆ, ಈ ಬಾರಿ ರಜನಿಕಾಂತ್ ಬೆಂಗಳೂರಿಗೆ ಬಂದದ್ದು ತನ್ನ ಅತ್ತಿಗೆಯ ಅಂತಿಮ ದರ್ಶನ ಪಡೆಯಲು ಎನ್ನುವುದು ಬೇಸರದ ಸಂಗತಿ.
ಹೌದು, ನಟ ರಜನಿಕಾಂತ್ ಅವರ ಸಹೋದರ ಸತ್ಯ ನಾರಾಯಣ್ ಅವರ ಪತ್ನಿ ಪದ್ಮಾವತಿ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿರುವ ಸತ್ಯ ನಾರಾಯಣ್ ಅವರ ನಿವಾಸದಲ್ಲಿ ಪದ್ಮಾವತಿ ಅವರ ಅಂತಿಮ ದರ್ಶನವನ್ನು ಏರ್ಪಡಿಸಲಾಗಿತ್ತು.
ಟಾಲಿವುಡ್ ನಿರ್ದೇಶಕಿ ಬಿ.ಜಯಾ ಇನ್ನಿಲ್ಲ
ಇದೇ ಕಾರಣಕ್ಕಾಗಿ ಬೆಂಗಳೂರಿಗೆ ಬಂದಿದ್ದ ರಜನಿಕಾಂತ್ ಹಾಗೂ ಪತ್ನಿ ಲತಾ ರಜನಿಕಾಂತ್ ಮತ್ತು ಪುತ್ರಿ ಸೌಂದರ್ಯ ಪದ್ಮಾವತಿ ಅವರ ಅಂತಿಮ ದರ್ಶನ ಪಡೆದುಕೊಂಡರು. ಇದೇ ಸಮಯದಲ್ಲಿ ಕನ್ನಡ ಸಿನಿಮಾ ನಿರ್ಮಾಪಕ ಹಾಗೂ ರಜನಿಕಾಂತ್ ಅವರ ಸ್ನೇಹಿತ ರಾಕ್ ಲೈನ್ ವೆಂಕಟೇಶ್ ಕೂಡ ರಜನಿಕಾಂತ್ ಜೊತೆಯಲ್ಲಿ ಇದ್ದು ಸಾಂತ್ವನ ಹೇಳಿದರು .