Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೂಕಂಪ ಸಂತ್ರಸ್ತರಿಗೆ ಶಿವಣ್ಣ, ವಿನಯ್ ನೆರವಿನ ಹಸ್ತ
ನೇಪಾಳ ಭೂಕಂಪ ಸಂತ್ರಸ್ತರ ಬದುಕು ಅಕ್ಷರಶಃ ಅತಂತ್ರವಾಗಿದೆ. ಜಗತ್ತಿನ ನಾನಾ ಮೂಲೆಗಳಿಂದ ಪರಿಹಾರ ನಿಧಿ, ಸಾಮಗ್ರಿ ಹರಿದುಬರುತ್ತಿದೆ. ಅಲ್ಲಿನ ಅತಂತ್ರ ಬದುಕನ್ನು ಮತ್ತೆ ಕಟ್ಟುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಸಿನಿಮಾ ತಾರೆಗಳು ಮುಂದಾಗಿರುವುದು ಗೊತ್ತೇ ಇದೆ.
ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ರಗಳು ಸಾಗುತ್ತಿವೆ. ಸಿನಿಮಾ ತಾರೆಗಳು ತಮ್ಮ ಕೈಲಾದ ಸಹಾಯ ಮಾಡುತ್ತ ತಮ್ಮ ಅಭಿಮಾನಿಗಳ ನೆರವಿನೊಂದಿಗೆ ಪರಿಹಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಇಂದು ಅಣ್ಣಾವ್ರ ಕುಟುಂಬ ನೇಪಾಳ ಭೂಕಂಪ ಸಂತ್ರಸ್ತರ ನೆರವಿಗೆ ಧಾವಿಸಿ ದೇಣಿಗೆ ನೀಡಿತು. [ಭೂಕಂಪ ಸಂತ್ರಸ್ತರ ನೆರವಿಗೆ ಧಾವಿಸಿ ಬಂದ 'ವಿಭಾ' ಟ್ರಸ್ಟ್]
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಅವರ ಪುತ್ರ ವಿನಯ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ (ಮೇ.7) ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಪರಿಹಾರ ನಿಧಿ ಹೆಸರಿಗೆ ಬರೆದ ರು.10 ಲಕ್ಷದ ಚೆಕ್ (ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ವಿನಯ್ ರಾಜ್ ಕುಮಾರ್ ಅವರು ತಲಾ ರು.5 ಲಕ್ಷ) ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಅಂದಹಾಗೆ ಇಂದು (ಮೇ.7) ವಿನಯ್ ರಾಜ್ ಕುಮಾರ್ ಅವರ 25ನೇ ಹುಟ್ಟುಹಬ್ಬ. [ನೇಪಾಳದ ಸಂತ್ರಸ್ತರಿಗೆ ಮಾಗಡಿ ರೈತ ತೋರಿದ ಮಾನವೀಯತೆ]
ಭೂಕಂಪ, ನೆರೆ ಹಾವಳಿಯಂತಹ ವಿಕೋಪ ಪರಿಸ್ಥಿತಿಗಳಲ್ಲಿ ಸಹಾಯ ಹಸ್ತ ಚಾಚಲು ಅಣ್ಣಾವ್ರ ಕುಟುಂಬ ಸದಾ ಮುಂದಿದೆ. ಈ ಹಿಂದೆ ಉತ್ತರಾಖಂಡ ನೆರೆ ಹಾವಳಿಗೆ ತುತ್ತಾದಾಗಲೂ ಶಿವಣ್ಣ ಪರಿಹಾರ ನೀಡಿದ್ದರು. ಆಗಲೂ ಅಭಿಮಾನಿಗಳಿಗೂ ಶಿವಣ್ಣನ ಬೆನ್ನಿಗಿದ್ದರು. ಈಗಲೂ ಅಷ್ಟೇ. (ಫಿಲ್ಮಿಬೀಟ್ ಕನ್ನಡ)