Just In
Don't Miss!
- Sports
ಥೈಲ್ಯಾಂಡ್ ಓಪನ್: ಸಮೀರ್, ಸಾತ್ವಿಕ್-ಪೊನ್ನಪ್ಪ ಕ್ವಾರ್ಟರ್ ಫೈನಲ್ಗೆ
- News
ಬೆಂಗಳೂರು; ಜ. 24ರಿಂದ ಕೆಲವು ರೈಲುಗಳ ಸಂಚಾರ ರದ್ದು, ಪಟ್ಟಿ
- Lifestyle
ರುಚಿ ರುಚಿಯಾದ ಸ್ನ್ಯಾಕ್ಸ್ ಕಾರ್ನ್-ಚೀಸ್ ಬಾಲ್ ರೆಸಿಪಿ
- Automobiles
ಬೈಕ್ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು- 10 ಕೋಟಿ ಬೈಕ್ ಉತ್ಪಾದಿಸಿದ ಹೀರೋ ಮೋಟೊಕಾರ್ಪ್
- Finance
ದಿನದ ಗರಿಷ್ಠ ಮಟ್ಟದಿಂದ 500ಕ್ಕೂ ಹೆಚ್ಚು ಪಾಯಿಂಟ್ ಕುಸಿದ ಸೆನ್ಸೆಕ್ಸ್
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಜ್ ಹುಟ್ಟುಹಬ್ಬದ ಖುಷಿ ಹೆಚ್ಚಿಸಿದ ಚಿನ್ನಸ್ವಾಮಿ ಕ್ರೀಡಾಂಗಣ
ನಿನ್ನೆ (ಏಪ್ರಿಲ್ 24) ರಾಜ್ ಕುಮಾರ್ ಹುಟ್ಟುಹಬ್ಬ. ಪ್ರತಿ ವರ್ಷದಂತೆ ಈ ಬಾರಿಯೂ ಅಭಿಮಾನಿಗಳು ಈ ದಿನವನ್ನು ಆಚರಣೆ ಮಾಡಿದ್ದಾರೆ. ಆದರೆ, ಈ ವರ್ಷದ ಹುಟ್ಟುಹಬ್ಬ ಕೆಲವು ವಿಶೇಷ ಕಾರಣಗಳಿಂದ ಬಹಳಷ್ಟು ಖುಷಿ ನೀಡಿದೆ.
ಐಪಿಎಲ್ ಪಂದ್ಯವಳಿ ಶುರುವಾಗಿ ಬಹಳ ದಿನಗಳು ಕಳೆದಿವೆ. ದಿನ ನಡೆಯುವ ಪಂದ್ಯದ ರೀತಿ ನಿನ್ನೆಯೂ ಪಂದ್ಯ ನಡೆಯಿತು. ಬೆಂಗಳೂರು ಹಾಗೂ ಪಂಜಾಬ್ ನಡುವೆ ನಡೆದ ಈ ಪಂದ್ಯದಲ್ಲಿ ರಾಜ್ ದರ್ಶನ ಆಗಿದೆ.
ದೇವರಂತೆ ಪ್ರತ್ಯಕ್ಷವಾದ ರಾಜ್ ರನ್ನು ನೋಡಿ ಈ ಹುಡುಗ ಕೈ ಸಿಕ್ಕ ಹಣವನ್ನೆಲ್ಲ ನೀಡಿದ್ದ!
ಬೆಂಗಳೂರಿನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸಾಕಷ್ಟು ಕನ್ನಡಿಗರು ಕ್ರಿಕೆಟ್ ನೋಡಲು ಹೋಗಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜ್ ಕುಮಾರ್ ಅವರ ಫೋಟೋವನ್ನು ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಿತ್ತು. ದೊಡ್ಡ ಪರದೆ ಮೇಲೆ ರಾಜ್ ಕುಮಾರ್ ಫೋಟೋ ಹಾಗೂ ಅವರ ಹಾಡನ್ನು ಕೇಳಿ ಅಭಿಮಾನಿಗಳು ಖುಷಿಯಾದರು. ಇಡೀ ಕ್ರೀಡಾಂಗಣ ಈ ಸಂದರ್ಭವನ್ನು ಸಂಭ್ರಮಿಸಿತು.
ಮತ್ತೊಂದು ವಿಶೇಷ ಎಂದರೆ, ಈ ಪಂದ್ಯವನ್ನು ವೀಕ್ಷಣೆ ಮಾಡಲು ನಟ ಶಿವರಾಜ್ ಕುಮಾರ್ ಸಹ ಹೋಗಿದ್ದರು. ನಿರ್ಮಾಪಕ ಶ್ರೀಕಾಂತ್ ಹಾಗೂ ನಿರ್ದೇಶಕ ರಘುರಾಮ್ ಇಬ್ಬರು ಶಿವಣ್ಣನ ಜೊತೆಗೆ ಪಂದ್ಯವನ್ನು ಆನಂದಿಸಿದರು.
ಡಾ, ರಾಜ್ ಬಗ್ಗೆ ದರ್ಶನ್, ಸೃಜನ್, ತರುಣ್ ಅಭಿಮಾನದ ನುಡಿ
ಈ ಎಲ್ಲ ವಿಶೇಷತೆಗಳ ಜೊತೆಗೆ ಪಂಜಾಬ್ ವಿರುದ್ಧ ಆರ್ ಸಿಬಿ ಪಂದ್ಯವನ್ನು ಗೆದ್ದಿದೆ. 17 ರನ್ನಗಳಿಂದ ಬೆಂಗಳೂರು ತಂಡ ನಿನ್ನೆಯ ಪಂದ್ಯದಲ್ಲಿ ಜಯ ಪಡೆದಿದೆ.