Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಹುಟ್ಟುಹಬ್ಬದ ಖುಷಿ ಹೆಚ್ಚಿಸಿದ ಚಿನ್ನಸ್ವಾಮಿ ಕ್ರೀಡಾಂಗಣ
Recommended Video
ನಿನ್ನೆ (ಏಪ್ರಿಲ್ 24) ರಾಜ್ ಕುಮಾರ್ ಹುಟ್ಟುಹಬ್ಬ. ಪ್ರತಿ ವರ್ಷದಂತೆ ಈ ಬಾರಿಯೂ ಅಭಿಮಾನಿಗಳು ಈ ದಿನವನ್ನು ಆಚರಣೆ ಮಾಡಿದ್ದಾರೆ. ಆದರೆ, ಈ ವರ್ಷದ ಹುಟ್ಟುಹಬ್ಬ ಕೆಲವು ವಿಶೇಷ ಕಾರಣಗಳಿಂದ ಬಹಳಷ್ಟು ಖುಷಿ ನೀಡಿದೆ.
ಐಪಿಎಲ್ ಪಂದ್ಯವಳಿ ಶುರುವಾಗಿ ಬಹಳ ದಿನಗಳು ಕಳೆದಿವೆ. ದಿನ ನಡೆಯುವ ಪಂದ್ಯದ ರೀತಿ ನಿನ್ನೆಯೂ ಪಂದ್ಯ ನಡೆಯಿತು. ಬೆಂಗಳೂರು ಹಾಗೂ ಪಂಜಾಬ್ ನಡುವೆ ನಡೆದ ಈ ಪಂದ್ಯದಲ್ಲಿ ರಾಜ್ ದರ್ಶನ ಆಗಿದೆ.
ದೇವರಂತೆ ಪ್ರತ್ಯಕ್ಷವಾದ ರಾಜ್ ರನ್ನು ನೋಡಿ ಈ ಹುಡುಗ ಕೈ ಸಿಕ್ಕ ಹಣವನ್ನೆಲ್ಲ ನೀಡಿದ್ದ!
ಬೆಂಗಳೂರಿನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸಾಕಷ್ಟು ಕನ್ನಡಿಗರು ಕ್ರಿಕೆಟ್ ನೋಡಲು ಹೋಗಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜ್ ಕುಮಾರ್ ಅವರ ಫೋಟೋವನ್ನು ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಿತ್ತು. ದೊಡ್ಡ ಪರದೆ ಮೇಲೆ ರಾಜ್ ಕುಮಾರ್ ಫೋಟೋ ಹಾಗೂ ಅವರ ಹಾಡನ್ನು ಕೇಳಿ ಅಭಿಮಾನಿಗಳು ಖುಷಿಯಾದರು. ಇಡೀ ಕ್ರೀಡಾಂಗಣ ಈ ಸಂದರ್ಭವನ್ನು ಸಂಭ್ರಮಿಸಿತು.
ಮತ್ತೊಂದು ವಿಶೇಷ ಎಂದರೆ, ಈ ಪಂದ್ಯವನ್ನು ವೀಕ್ಷಣೆ ಮಾಡಲು ನಟ ಶಿವರಾಜ್ ಕುಮಾರ್ ಸಹ ಹೋಗಿದ್ದರು. ನಿರ್ಮಾಪಕ ಶ್ರೀಕಾಂತ್ ಹಾಗೂ ನಿರ್ದೇಶಕ ರಘುರಾಮ್ ಇಬ್ಬರು ಶಿವಣ್ಣನ ಜೊತೆಗೆ ಪಂದ್ಯವನ್ನು ಆನಂದಿಸಿದರು.
ಡಾ, ರಾಜ್ ಬಗ್ಗೆ ದರ್ಶನ್, ಸೃಜನ್, ತರುಣ್ ಅಭಿಮಾನದ ನುಡಿ
ಈ ಎಲ್ಲ ವಿಶೇಷತೆಗಳ ಜೊತೆಗೆ ಪಂಜಾಬ್ ವಿರುದ್ಧ ಆರ್ ಸಿಬಿ ಪಂದ್ಯವನ್ನು ಗೆದ್ದಿದೆ. 17 ರನ್ನಗಳಿಂದ ಬೆಂಗಳೂರು ತಂಡ ನಿನ್ನೆಯ ಪಂದ್ಯದಲ್ಲಿ ಜಯ ಪಡೆದಿದೆ.