Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದ್ಮಾವತಿ' ರಿಲೀಸ್ ಆದ್ರೆ ದೀಪಿಕಾ ಮೂಗು ಕತ್ತರಿಸುತ್ತೇವೆ: ರಜಪೂತರು ಎಚ್ಚರಿಕೆ.!
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತಿ' ಸಿನಿಮಾ ಬಿಡುಗಡೆಯಾದರೇ ನಟಿ ದೀಪಿಕಾ ಪಡುಕೋಣೆ ಮೂಗು ಕತ್ತರಿಸುತ್ತೇವೆ ಎಂದು ರಜಪೂತ ಕರಣಿ ಸೇನೆ ಕಾರ್ಯಕರ್ತರು ಬೆದರಿಕೆಯೊಡ್ಡಿದ್ದಾರೆ.
'ರಜಪೂತರು ಮಹಿಳೆಯರ ಮೇಲೆ ಕೈ ಮಾಡಲ್ಲ, ಆದರೆ ಅಗತ್ಯ ಬಿದ್ದರೆ ಮಾಡಬೇಕಾಗುತ್ತದೆ, ಲಕ್ಷ್ಮಣ ಶೂರ್ಪನಖಿಗೆ ಮಾಡಿದಂತೆ ದೀಪಿಕಾಗೆ ಮಾಡಬೇಕಾಗುತ್ತದೆ' ಎಂದು ರಜಪೂತ ಕರಣಿ ಸೇನೆ ಸದಸ್ಯ ಮಹಿಪಾಲ್ ಸಿಂಗ್ ಮಕ್ರಾನಾ ವಿಡಿಯೋ ಸಂದೇಶ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
'ಪದ್ಮಾವತಿ' ಸಿನಿಮಾ ಬಿಡುಗಡೆಗೆ ಜೈಪುರ ರಾಜ ಮನೆತನದ ವಿರೋಧ!
ಇನ್ನೂ ಬಗ್ಗೆ ಮಾತನಾಡಿದ ರಜಪೂತ್ ಕರಣಿ ಸೇನೆಯ ಲೋಕೇಂದ್ರಾ ಸಿಂಗ್ ಕಲ್ವಿ 'ಪ್ರತಿಭಟನೆಯಲ್ಲಿ ಲಕ್ಷಾಂತರ ಜನ ಭಾಗವಹಿಸುತ್ತೇವೆ, ನಮ್ಮ ಪೂರ್ವಜರು ರಕ್ತದಲ್ಲಿ ಇತಿಹಾಸ ಬರೆದಿದ್ದಾರೆ, ಅದಕ್ಕೆ ಕಪ್ಪು ಮಸಿ ಬಳಿಯಲು ಯಾರನ್ನೂ ಬಿಡುವುದಿಲ್ಲ, ನಾವು ಡಿಸೆಂಬರ್ 1ಕ್ಕೆ ಭಾರತ್ ಬಂದ್ಗೆ ಕರೆ ನೀಡಿದ್ದೇವೆ' ಎಂದಿದ್ದಾರೆ.
'ಪದ್ಮಾವತಿ' ಚಿತ್ರದ ವಿವಾದ ಏನಿದು? ವಿರೋಧ ಯಾಕೆ?
ಪದ್ಮಾವತಿ ಚಿತ್ರದಲ್ಲಿ ರಜಪೂತರ ರಾಣಿ ಪದ್ಮಾವತಿ ಬಗ್ಗೆ ಅವಹೇಳನ ಮಾಡಲಾಗಿದೆ. ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ರಾಷ್ಟ್ರದ್ಯಾಂತ ರಜಪೂತರು ಚಿತ್ರ ಬಿಡುಗಡೆಯಾಗದಂತೆ ವಿರೋಧಿಸುತ್ತಿದ್ದಾರೆ.