Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರಿಕ್ ಜೋಡಿ ಬ್ರೇಕ್ ಅಪ್: ಮತ್ತೆ ಅದಲು ಬದಲಾಯ್ತು ಉಂಗುರ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮುರಿದು ಬಿದ್ದಿದೆ. ಇಷ್ಟು ದಿನಗಳ ಕಾಲ ಗಾಸಿಪ್ ವಿಚಾರವಾಗಿ ಹರಿದಾಡುತ್ತಿದ್ದ ಸುದ್ದಿ ಈಗ ಎಲ್ಲೆಡೆ ವೈರಲ್ ಆಗಿದೆ. ರಶ್ಮಿಕಾ ಹಾಗೂ ರಕ್ಷಿತ್ ಮಧ್ಯೆ ಕಳೆದ ಒಂದು ತಿಂಗಳಿಂದ ಎಲ್ಲವೂ ಸರಿಯಿಲ್ಲ ಎನ್ನುವುದು ತಿಳಿದ ರಶ್ಮಿಕಾ ಕುಟುಂಬಸ್ಥರು ಮಧ್ಯ ಪ್ರವೇಶ ಮಾಡಿ ಇದನ್ನು ಇಲ್ಲಿಗೆ ನಿಲ್ಲಿಸೋಣ ಎನ್ನುವ ನಿರ್ಧಾರ ಮಾಡಿದ್ದಾರೆ.
ಸದ್ಯ ರಶ್ಮಿಕಾ ಚಿತ್ರರಂಗದಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದು ವೃತ್ತಿ ಜೀವನದತ್ತ ಗಮನ ಹರಿಸುವಂತೆ ಕುಟುಂಬಸ್ಥರು ಸಲಹೆ ನೀಡಿದ್ದಾರೆ. ಬ್ರೇಕ್ ಅಪ್ ಎಲ್ಲಿಯವರೆಗೂ ಮುಟ್ಟಿದೆ ಎಂದರೆ ಇಬ್ಬರು ಕುಟುಂಬದವರು ನಿಶ್ಚಿತಾರ್ಥಕ್ಕೆ ಹಾಕಿಕೊಂಡಿದ್ದ ಉಂಗುರಗಳನ್ನು ವಾಪಸ್ ಮಾಡಿದ್ದಾರಂತೆ.
ರಶ್ಮಿಕಾ -ರಕ್ಷಿತ್ ಬ್ರೇಕ್ ಅಪ್: ಆಪ್ತ ಮೂಲಗಳಿಂದ ಬಂದ ಬ್ರೇಕಿಂಗ್ ನ್ಯೂಸ್!
ಅದಷ್ಟೇ ಅಲ್ಲದೆ ನಿಶ್ಚಿತಾರ್ಥಕ್ಕೆ ಎರಡು ಕುಟುಂಬ ಸೇರಿ ಮಾಡಿದ್ದ ಖರ್ಚು ವೆಚ್ಚವನ್ನು ಲೆಕ್ಕ ಹಾಕಿದ್ದಾರೆ ಎನ್ನುತಿವೆ ಮೂಲಗಳು. ರಶ್ಮಿಕಾ ಹಾಗೂ ರಕ್ಷಿತ್ ನಿಶ್ಚಿತಾರ್ಥ ಆದಾಗಲೇ ಗಾಂಧಿನಗರದ ಸಾಕಷ್ಟು ಮಂದಿ ಈ ಸಂಬಂಧ ಹೆಚ್ಚಿನ ದಿನ ಉಳಿಯುವುದಿಲ್ಲ ಎಂದಿದ್ದರು.
ಈಗ ಗಾಸಿಪ್ ಆಗಿದ್ದ ಸುದ್ದಿ ನಿಜವಾಗಿದೆ. ಇನ್ನು ಮುಂದೆ ರಕ್ಷಿತ್ ಹಾಗೂ ರಶ್ಮಿಕಾ ಯಾವುದೇ ಸಂಬಂಧಗಳು ಇಲ್ಲದೇ ಇಬ್ಬರು ಸಿನಿಮಾರಂಗದ ಇಬ್ಬರು ಸ್ಟಾರ್ ಗಳಾಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.