Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗಾಗಿ ರಕ್ಷಿತ್ ಶೆಟ್ಟಿ ಮಾಡಿದ ಒಳ್ಳೆಯ ಕೆಲಸ ಇದು
Recommended Video
ಕೊಡಗು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಭೂಕುಸಿತ ಉಂಟಾಗಿ ಅಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗಾಗಿ ಕನ್ನಡ ಚಿತ್ರರಂಗದ ಕೆಲವು ಸ್ಟಾರ್ ಗಳು ಹಾಗೂ ಅವರ ಅಭಿಮಾನಿಗಳು ನೆರವು ನೀಡಿದ್ದರು.
ಕೊಡಗು ಜನತೆಗೆ ನಟ ರಕ್ಷಿತ್ ಶೆಟ್ಟಿ ಯಾವ ರೀತಿ ಸಹಾಯ ಮಾಡಿದರು ಎಂಬುದು ಅನೇಕರಿಗೆ ಗೊತ್ತಿಲ್ಲ. ಈ ವಿಷ್ಯವನ್ನ ಖುದ್ದು ರಕ್ಷಿತ್ ಶೆಟ್ಟಿ ಅವರೇ 'ಕನ್ನಡದ ಕೋಟ್ಯಧಿಪತಿ' ಕಾರ್ಯಕ್ರಮದಲ್ಲಿ ಬಹಿರಂಗಪಡಿಸಿದ್ದಾರೆ.
ಒದ್ದೆಕಣ್ಣಿನಿಂದ ಮನಃಪೂರ್ವಕವಾಗಿ ಕೊಡಗಿನ ಪರವಾಗಿ ಎಲ್ಲರಿಗೂ ವಂದಿಸಿದ ರಶ್ಮಿಕಾ
ಮೂಲತಃ ಉಡುಪಿಯವರಾದ ರಕ್ಷಿತ್ ಶೆಟ್ಟಿ, ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರ ಕೈಹಿಡಿಯಲಿದ್ದಾರೆ. ಈ ಮೂಲಕ ಕೊಡಗು ಜಿಲ್ಲೆಯ ಅಳಿಯನಾಗುತ್ತಿದ್ದಾರೆ. ಇತ್ತೀಚಿಗಷ್ಟೆ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗಿನ ಸಂತ್ರಸ್ಥರಿಗೆ ದೊಡ್ಡ ಮಟ್ಟದ ಸಹಾಯಹಸ್ತ ಚಾಚಿದ್ದರು. ಹಾಗಿದ್ರೆ, ಕೊಡಗು ಜನತೆಗಾಗಿ ರಕ್ಷಿತ್ ಶೆಟ್ಟಿ ಮಾಡಿದ ಒಳ್ಳೆಯ ಕೆಲಸವೇನು.? ಮುಂದೆ ಓದಿ....
ಕೋಟ್ಯಧಿಪತಿಯಲ್ಲಿ ಗೆದ್ದ ಹಣ ಕೊಡಗಿಗೆ.!
ನಟ ರಕ್ಷಿತ್ ಶೆಟ್ಟಿ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದರು. ಇದರಿಂದ ಬರುವ ಹಣವನ್ನ ಕೊಡಗಿನ ಜನರಿಗೆ ಸಹಾಯ ಮಾಡಲು ಬಳಸುತ್ತೇನೆ. ಅದಕ್ಕಾಗಿಯೇ ಈ ಆಟವಾಡುತ್ತಿದ್ದೇನೆ ಎಂದು ರಕ್ಷಿತ್ ಶೆಟ್ಟಿ ತಿಳಿಸಿದರು.
ಕೊಡಗಿನ ಕಣ್ಣೀರಿಗೆ ಕರವಸ್ತ್ರ ಆದ ಸಂಚಾರಿ ವಿಜಯ್ ಮತ್ತು ತಂಡ
ರಕ್ಷಿತ್ ಗೆದ್ದ ಹಣವೆಷ್ಟು.?
ಕೊಡಗಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡಲು ಕನ್ನಡದ ಕೋಟ್ಯಧಿಪತಿಯಲ್ಲಿ ಆಡವಾಡಿದ ರಕ್ಷಿತ್ ಶೆಟ್ಟಿ ಹನ್ನೊಂದು ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ 6.40 ಲಕ್ಷ ಗೆದ್ದರು. ಈ ಹಣದಿಂದ ಕೊಡಗಿನ ಜನರಿಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ.
ಕೊಡಗು ಜನರ ಜೊತೆ ನಿಂತ ಪ್ರಿಯಾಂಕಾ ಉಪೇಂದ್ರ
'ಚಾರ್ಲಿ-666' ಚಿತ್ರತಂಡದಿಂದ ನೆರವು
ನಿಧಾನವಾಗಿ ಕೊಡುಗೆ ಮೊದಲ ಸ್ಥಿತಿಯತ್ತ ಹೆಜ್ಜೆ ಇಟ್ಟಿದೆ. ಆರಂಭದಲ್ಲಿ ಎಲ್ಲರಂತೆ ರಕ್ಷಿತ್ ಶೆಟ್ಟಿ ಅಭಿನಯದ 'ಚಾರ್ಲಿ-666' ಚಿತ್ರತಂಡ ಅಲ್ಲಿನ ಜನರಿಗೆ ನೆರವು ನೀಡಿತ್ತಂತೆ. ಅಗತ್ಯ ವಸ್ತುಗಳನ್ನ ಸಂಗ್ರಹಿಸಿ ಅಲ್ಲಿನ ಜನರಿಗೆ ಪೂರೈಸುವ ಕೆಲಸ ಮಾಡಿದ್ದರಂತೆ.
ಕೊಡಗಿಗೆ ಸಹಾಯ ಹಸ್ತ ಚಾಚಿದ 'ಬಿಗ್ ಬಾಸ್' ದಿವಾಕರ್
ದೊಡ್ಡ ಸಹಾಯ ಮಾಡಿದ ರಶ್ಮಿಕಾ
ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಪ್ರವಾಹ ಪೀಡಿತ ತವರು ಜಿಲ್ಲೆ ಕೊಡಗಿನ ಸಂಕಷ್ಟಕ್ಕೆ ಸ್ಪಂದಿಸಿದ್ದು, 31 ಸಂತ್ರಸ್ತ ಕುಟುಂಬಗಳಿಗೆ ತಲಾ 10 ಸಾವಿರ ರುಪಾಯಿ ನೆರವು ನೀಡಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಮನೆ ನಿರ್ಮಾಣಕ್ಕೆ ನೆರವಾಗುವುದಾಗಿ ಹೇಳಿದ್ದಾರೆ.
ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಧನಂಜಯ್