Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಜ್ಜಿಯನ್ನು ಕಳೆದುಕೊಂಡ ನೋವಿನಲ್ಲಿ ನಟ ರಕ್ಷಿತ್ ಶೆಟ್ಟಿ
ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಇಡೀ ಕುಟುಂಬ ದುಃಖದಲ್ಲಿ ಇದೆ. ಅಜ್ಜಿಯ ಸಾವಿನ ನೋವಿನಲ್ಲಿ ರಕ್ಷಿತ್ ಶೆಟ್ಟಿ ಇದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಕ್ಷಿತ್ ಶೆಟ್ಟಿ ಅಜ್ಜಿ ವನಜಾ ಶೆಟ್ಟಿ ವಾರದ ಹಿಂದೆ ನಿಧನ ಹೊಂದಿದ್ದರು. ಮೃತರ ಉತ್ತರ ಕ್ರಿಯೆಯಲ್ಲಿ ಇಂದು (ಅಕ್ಟೋಬರ್ 9) ನಡೆದಿದ್ದು, ರಕ್ಷಿತ್ ಇದರಲ್ಲಿ ಭಾಗಿಯಾಗಿದ್ದರು. ಸಿನಿಮಾದ ಕೆಲಸಗಳನ್ನು ಅಲ್ಲಿಯೇ ಬಿಟ್ಟು ಉಡುಪಿಗೆ ರಕ್ಷಿತ್ ಶೆಟ್ಟಿ ಬಂದಿದ್ದಾರೆ.
ಬೀದಿ ನಾಯಿಗಳಿಗೆ ಗೂಡು ಒದಗಿಸಲು ಮುಂದಾದ ರಕ್ಷಿತ್ ಶೆಟ್ಟಿ
ವನಜಾ ಶೆಟ್ಟಿ ಬೈಕಾಡಿ ವಿಠಲ ಶೆಟ್ಟಿಯವರ ಧರ್ಮಪತ್ನಿ. ನಟ ರಕ್ಷಿತ್ ಶೆಟ್ಟಿ ತಂದೆಯ ಚಿಕ್ಕಮ್ಮ. ರಕ್ಷಿತ್ ಶೆಟ್ಟಿ ಬಾಲ್ಯದಿಂದ ಅಜ್ಜಿ ವನಜಾ ಶೆಟ್ಟಿ ಕಂಡರೆ ಬಹಳ ಪ್ರೀತಿ ಹೊಂದಿದ್ದರಂತೆ. ಸಿನಿಮಾ ಕೆಲಸಗಳ ನಡುವೆ ಉಡುಪಿಗೆ ಬಂದು ಅಜ್ಜಿಯನ್ನು ಆಗಾಗ ಮಾತಾಡಿಕೊಂಡು ಹೋಗುತ್ತಿದ್ದರು. ರಕ್ಷಿತ್ ಮತ್ತು ವನಜಾ ಶೆಟ್ಟಿ ಒಡನಾಟವನ್ನು ಸಂಬಂಧಿ ರಾಜೇಶ್ ಹೇಳಿದ್ದಾರೆ. ಮೃತರ ಉತ್ತರ ಕ್ರಿಯೆ ಅಲೆವೂರು ದೊಡ್ಡ ಮನೆ ಪ್ರಿಯಾ ನಿವಾಸದಲ್ಲಿ ಇಂದು ನಡೆದಿದೆ.
ನಟ ರಕ್ಷಿತ್ ಶೆಟ್ಟಿ ಸದ್ಯ 'ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಆಗಲಿದೆ. ಮೂರು ವರ್ಷಗಳ ನಂತರ ಮತ್ತೆ ತೆರೆ ಮೇಲೆ ರಕ್ಷಿತ್ ಕಾಣಿಸುತ್ತಿದ್ದಾರೆ. ದೊಡ್ಡ ಬಜೆಟ್ ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ ಮೇಲೆ ದೊಡ್ಡ ನಿರೀಕ್ಷೆ ಇದೆ.