Don't Miss!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ಅಮಿತ್ ಶಾ ಜಮ್ಮುವಿನಿಂದ ಲಾಲ್ ಚೌಕ್ವರೆಗೆ ನಡೆಯಲಿ: ರಾಹುಲ್ ಗಾಂಧಿ ಸವಾಲು
- Sports
ಭಾರತ ತಂಡಕ್ಕೆ ಏಕದಿನ ವಿಶ್ವಕಪ್ ಗೆಲ್ಲುವ ಆಸೆಯಿದ್ದರೆ ಹೀಗೆ ಮಾಡಲಿ ಎಂದ ಸೌರವ್ ಗಂಗೂಲಿ
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಯುವರತ್ನ' ನೋಡಿ ಥ್ರಿಲ್ ಆದ ರಕ್ಷಿತ್ ಶೆಟ್ಟಿ ಹೇಳಿದ್ದು ಒಂದೇ ಮಾತು
ನಾಯಕ ನಟನೊಬ್ಬ ಮತ್ತೊಬ್ಬ ಹೀರೋನ ಸಿನಿಮಾ ನೋಡುವುದು, ನೋಡಿ ಮೆಚ್ಚಿಕೊಳ್ಳುವುದು ಅಪರೂಪ. ಆದರೆ ನಟ ರಕ್ಷಿತ್ ಶೆಟ್ಟಿ ಇದಕ್ಕೆ ಅಪವಾದ. ಒಳ್ಳೆಯ ಸಿನಿಮಾಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸದೇ ಇರುವುದಿಲ್ಲ ಅವರು.
Recommended Video
ರಕ್ಷಿತ್ ಶೆಟ್ಟಿ ನಿನ್ನೆ ತಡರಾತ್ರಿ 'ಯುವರತ್ನ' ಸಿನಿಮಾ ನೋಡಿದ್ದಾರೆ. ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿರುವ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ತಡರಾತ್ರಿ ಸಿನಿಮಾ ನೋಡಿದ್ದಾರೆ ರಕ್ಷಿತ್ ಶೆಟ್ಟಿ, ಸಿನಿಮಾ ನೋಡುವ ಮುನ್ನಾ ಒಂದು ಟ್ವೀಟ್ ಮಾಡಿದ್ದರು, ಸಿನಿಮಾ ಮುಗಿದ ಮೇಲೆ ಮತ್ತೆ ಟ್ವೀಟ್ ಮಾಡಿದ್ದಾರೆ. 'ಅಪ್ಪು ಅವರದ್ದು ಒನ್ಮ್ಯಾನ್ ಶೋ, ಅಪ್ಪು ಡ್ಯಾನ್ಸ್ ಅದ್ಭುತ' ಎಂದು ಒಂದು ಸಾಲಿನ ಟ್ವೀಟ್ ಮಾಡಿ ಸಿನಿಮಾವನ್ನು ಅಪ್ಪು ಅಭಿನಯವನ್ನು ಹೊಗಳಿದ್ದಾರೆ ರಕ್ಷಿತ್ ಶೆಟ್ಟಿ. ಟ್ವೀಟ್ ಅನ್ನು ಪುನೀತ್ ರಾಜ್ಕುಮಾರ್, ಸಂತೋಶ್ ಆನಂದ್ ರಾಮ್, ಹೊಂಬಾಳೆ ಫಿಲಮ್ಸ್, ವಿಜಯ್ ಕಿರಗಂದೂರ್, ಕಾರ್ತಿಕ್ ಗೌಡಗೆ ಟ್ಯಾಗ್ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ, ಪುನೀತ್ ಅವರು ಒಳ್ಳೆಯ ಗೆಳೆಯರು. ಸರ್ಕಾರವು ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿದಾಗ 'ಯುವರತ್ನ' ಚಿತ್ರದ ಪರವಾಗಿ ಟ್ವೀಟ್ ಮಾಡಿದ್ದರು ನಟ ರಕ್ಷಿತ್ ಶೆಟ್ಟಿ. ಸರ್ಕಾರವು ನಿರ್ಬಂಧವನ್ನು ತೆಗೆದ ಬಳಿಕ ಪುನೀತ್ ಅವರು ತಮ್ಮ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ರಕ್ಷಿತ್ ಶೆಟ್ಟಿ ಅವರ ಹೆಸರು ಹೇಳುವುದನ್ನು ಮರೆಯಲಿಲ್ಲ ಪುನೀತ್.
ಇನ್ನು ನಟ ರಕ್ಷಿತ್ ಶೆಟ್ಟಿ ಅಭಿನಯದ 'ಚಾರ್ಲಿ 999' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದರ ಜೊತೆಗೆ ಕೆಲವೇ ದಿನಗಳಲ್ಲಿ 'ಸಪ್ತ ಸಾಗರದಾಚೆ ಎಲ್ಲೊ' ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಆ ನಂತರ ರಕ್ಷಿತ್ ತಮ್ಮದೇ ನಿರ್ದೇಶನದ ಸಿನಿಮಾ ಆರಂಭಿಸಲಿದ್ದಾರೆ. ಅದರ ನಂತರ ಬರಲಿದೆ 'ಕಿರಿಕ್ ಪಾರ್ಟಿ 2'.