Don't Miss!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುವರತ್ನ' ನೋಡಿ ಥ್ರಿಲ್ ಆದ ರಕ್ಷಿತ್ ಶೆಟ್ಟಿ ಹೇಳಿದ್ದು ಒಂದೇ ಮಾತು
ನಾಯಕ ನಟನೊಬ್ಬ ಮತ್ತೊಬ್ಬ ಹೀರೋನ ಸಿನಿಮಾ ನೋಡುವುದು, ನೋಡಿ ಮೆಚ್ಚಿಕೊಳ್ಳುವುದು ಅಪರೂಪ. ಆದರೆ ನಟ ರಕ್ಷಿತ್ ಶೆಟ್ಟಿ ಇದಕ್ಕೆ ಅಪವಾದ. ಒಳ್ಳೆಯ ಸಿನಿಮಾಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸದೇ ಇರುವುದಿಲ್ಲ ಅವರು.
Recommended Video
ರಕ್ಷಿತ್ ಶೆಟ್ಟಿ ನಿನ್ನೆ ತಡರಾತ್ರಿ 'ಯುವರತ್ನ' ಸಿನಿಮಾ ನೋಡಿದ್ದಾರೆ. ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿರುವ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ತಡರಾತ್ರಿ ಸಿನಿಮಾ ನೋಡಿದ್ದಾರೆ ರಕ್ಷಿತ್ ಶೆಟ್ಟಿ, ಸಿನಿಮಾ ನೋಡುವ ಮುನ್ನಾ ಒಂದು ಟ್ವೀಟ್ ಮಾಡಿದ್ದರು, ಸಿನಿಮಾ ಮುಗಿದ ಮೇಲೆ ಮತ್ತೆ ಟ್ವೀಟ್ ಮಾಡಿದ್ದಾರೆ. 'ಅಪ್ಪು ಅವರದ್ದು ಒನ್ಮ್ಯಾನ್ ಶೋ, ಅಪ್ಪು ಡ್ಯಾನ್ಸ್ ಅದ್ಭುತ' ಎಂದು ಒಂದು ಸಾಲಿನ ಟ್ವೀಟ್ ಮಾಡಿ ಸಿನಿಮಾವನ್ನು ಅಪ್ಪು ಅಭಿನಯವನ್ನು ಹೊಗಳಿದ್ದಾರೆ ರಕ್ಷಿತ್ ಶೆಟ್ಟಿ. ಟ್ವೀಟ್ ಅನ್ನು ಪುನೀತ್ ರಾಜ್ಕುಮಾರ್, ಸಂತೋಶ್ ಆನಂದ್ ರಾಮ್, ಹೊಂಬಾಳೆ ಫಿಲಮ್ಸ್, ವಿಜಯ್ ಕಿರಗಂದೂರ್, ಕಾರ್ತಿಕ್ ಗೌಡಗೆ ಟ್ಯಾಗ್ ಮಾಡಿದ್ದಾರೆ.
ರಕ್ಷಿತ್ ಶೆಟ್ಟಿ, ಪುನೀತ್ ಅವರು ಒಳ್ಳೆಯ ಗೆಳೆಯರು. ಸರ್ಕಾರವು ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿದಾಗ 'ಯುವರತ್ನ' ಚಿತ್ರದ ಪರವಾಗಿ ಟ್ವೀಟ್ ಮಾಡಿದ್ದರು ನಟ ರಕ್ಷಿತ್ ಶೆಟ್ಟಿ. ಸರ್ಕಾರವು ನಿರ್ಬಂಧವನ್ನು ತೆಗೆದ ಬಳಿಕ ಪುನೀತ್ ಅವರು ತಮ್ಮ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ರಕ್ಷಿತ್ ಶೆಟ್ಟಿ ಅವರ ಹೆಸರು ಹೇಳುವುದನ್ನು ಮರೆಯಲಿಲ್ಲ ಪುನೀತ್.
ಇನ್ನು ನಟ ರಕ್ಷಿತ್ ಶೆಟ್ಟಿ ಅಭಿನಯದ 'ಚಾರ್ಲಿ 999' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದರ ಜೊತೆಗೆ ಕೆಲವೇ ದಿನಗಳಲ್ಲಿ 'ಸಪ್ತ ಸಾಗರದಾಚೆ ಎಲ್ಲೊ' ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಆ ನಂತರ ರಕ್ಷಿತ್ ತಮ್ಮದೇ ನಿರ್ದೇಶನದ ಸಿನಿಮಾ ಆರಂಭಿಸಲಿದ್ದಾರೆ. ಅದರ ನಂತರ ಬರಲಿದೆ 'ಕಿರಿಕ್ ಪಾರ್ಟಿ 2'.