Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಂಬಾ ಕಷ್ಟದ ಹಂತದ ಚಿತ್ರೀಕರಣ ಮಾಡಿ ಮುಗಿಸಿದ ರಕ್ಷಿತ್ ಶೆಟ್ಟಿ '777 ಚಾರ್ಲಿ' ತಂಡ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ.
ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
Recommended Video
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.