Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಿಶ್ 'ರಾಮಾರ್ಜುನ' ಚಿತ್ರಕ್ಕೆ ರಕ್ಷಿತ್ ಶೆಟ್ಟಿ ನಿರ್ಮಾಪಕ!
ಅನೀಶ್ ತೇಜೇಶ್ವರ್ ನಟನೆಯ ರಾಮಾರ್ಜುನ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿದಿದ್ದು ಥಿಯೇಟರ್ಗೆ ಎಂಟ್ರಿ ಕೊಡಲು ಕಾಯುತ್ತಿದೆ. ಈ ನಡುವೆ ನಟ ರಕ್ಷಿತ್ ಶೆಟ್ಟಿ ರಾಮಾರ್ಜುನ ಚಿತ್ರಕ್ಕೆ ಜೊತೆಯಾಗಿದ್ದಾರೆ.
ಅನಿಶ್ ಮತ್ತು ರಕ್ಷಿತ್ ಶೆಟ್ಟಿ ಬಹಳ ವರ್ಷದಿಂದಲೂ ಗೆಳೆಯರು. 'ನಮ್ ಏರಿಯಾಲ್ ಒಂದಿನಾ' ಸಿನಿಮಾದಿಂದಲೂ ರಕ್ಷಿತ್ ಮತ್ತು ಅನಿಶ್ ಒಟ್ಟಿಗೆ ಇಂಡಸ್ಟ್ರಿಯಲ್ಲಿ ಬೆಳೆದವರು. ಇದೀಗ, ಗೆಳೆಯನ ಚಿತ್ರಕ್ಕೆ ರಕ್ಷಿತ್ ಬೆಂಬಲವಾಗಿ ನಿಂತಿದ್ದಾರೆ.
ಕಾಶ್ಮೀರದಿಂದ ಬಂತು ರಕ್ಷಿತ್ ಶೆಟ್ಟಿ '777 ಚಾರ್ಲಿ' ಸಿನಿಮಾದ ಅಪ್ ಡೇಟ್; ಏನದು?
ನಟನೆಯ ಜೊತೆ ಚೊಚ್ಚಲ ಬಾರಿಗೆ ಅನಿಶ್ ನಿರ್ದೇಶನ ಮಾಡಿದ್ದಾರೆ. ವಿಂಕ್ ವಿಶ್ಯೂಲ್ ಪ್ರೊಡಕ್ಷನ್ ಸಂಸ್ಥೆ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಈಗ ರಕ್ಷಿತ್ ಶೆಟ್ಟಿ ಸಹ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ.
ರಾಮಾರ್ಜುನ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ರಕ್ಷಿತ್ ಶೆಟ್ಟಿ, ಸಿನಿಮಾದ ನಿರ್ಮಾಪಕರಲ್ಲೊಬ್ಬರಾಗಿದ್ದಾರೆ. ಇದಕ್ಕೂ ಮುಂಚೆ 'ಕಿರಿಕ್ ಪಾರ್ಟಿ' ಸಿನಿಮಾ ಬಿಡುಗಡೆ ವೇಳೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಜೊತೆಯಾಗಿದ್ದರು. ಅದೇ ರೀತಿ ರಾಮಾರ್ಜುನ ಸಿನಿಮಾಗೆ ರಕ್ಷಿತ್ ಶೆಟ್ಟಿ ಬೆಂಬಲವಾಗಿ ನಿಂತಿದ್ದಾರೆ ಎಂದು ತಿಳಿದು ಬಂದಿದೆ.
ಷಷ್ಠಿ ಪೂಜೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
Recommended Video
ಇನ್ನುಳಿದಂತೆ ರಾಮಾರ್ಜುನ ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿದ್ದಾರೆ. ಇವರ ಜೊತೆಗೆ ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಅರುಣಾ ಬಾಲರಾಜ್ ಸೇರಿದಂತೆ ಮುಂತಾದವರು ತಾರಬಳಗದಲ್ಲಿದ್ದಾರೆ.