Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'777 ಚಾರ್ಲಿ' ಸಿನಿಮಾದಿಂದ ಔಟ್ ಆದ ಅರವಿಂದ್ ಅಯ್ಯರ್
'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ನಟಿಸಿದ್ದ ಅರವಿಂದ್ ಅಯ್ಯರ್ 'ಬೀಮಸೇನಾ ನಳಮಹರಾಜ' ಮತ್ತು '777 ಚಾರ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದರು. ಈ ಎರಡು ಸಿನಿಮಾಗಳಲ್ಲಿ 'ಬೀಮಸೇನಾ ನಳಮಹರಾಜ' ಸಿನಿಮಾದ ಚಿತ್ರೀಕರಣ ಸದ್ಯ ನಡೆಯುತ್ತಿತ್ತು. ಆದರೆ, '777 ಚಾರ್ಲಿ' ಸಿನಿಮಾದಿಂದ ಅರವಿಂದ್ ಅಯ್ಯರ್ ಔಟ್ ಆಗಿದ್ದಾರೆ.
ಅರವಿಂದ್ ಅಯ್ಯರ್ ಬದಲು ಈಗ ಚಿತ್ರಕ್ಕೆ ನಟ ರಕ್ಷಿತ್ ಶೆಟ್ಟಿ ನಾಯಕನಾಗಿದ್ದಾರೆ. ಆದರೆ ಅದಕ್ಕೆ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದಿಲ್ಲ. ಅರವಿಂದ್ ಅಯ್ಯರ್ ಈವರೆಗೆ ಸಿನಿಮಾದ ನಾಯ ಆಗಿದ್ದರು. ಈಗಾಗಲೇ ಸಿನಿಮಾದ ಫೋಟೋ ಶೂಟ್ ಕೂಡ ಆಗಿದ್ದು, ಪ್ರೀತಿಯ ನಾಯಿ ಜೊತೆಗೆ ಅರವಿಂದ್ ಅಯ್ಯರ್ ಕಾಣಿಸಿಕೊಂಡಿದ್ದ ಫೋಟೋ ಸಖತ್ ಆಗಿ ಇತ್ತು.
ಆದರೆ, ಈಗ ಇದ್ದಕಿದ್ದ ಹಾಗೆ, ಅರವಿಂದ್ ಅಯ್ಯರ್ ಮಾಡಬೇಕಾದ ಪಾತ್ರದಲ್ಲಿ ರಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ. ನಟನೆಯ ಜೊತೆಗೆ ಸಿನಿಮಾಗೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ರಕ್ಷಿತ್ ವಹಿಸಿಕೊಂಡಿದ್ದಾರೆ.
'777 ಚಾರ್ಲಿ' ಸಿನಿಮಾ ಶ್ವಾನ ಮತ್ತು ಮನುಷ್ಯನ ಬಾಂಡಿಂಗ್ ಹೇಳುವಂತಹ ಕಥೆಯನ್ನು ಹೊಂದಿದೆ. ಚಿತ್ರದಲ್ಲಿ ಶ್ವಾನದ ಹೆಸರು ಚಾರ್ಲಿ ಆಗಿದ್ದು, ಶ್ವಾನದ ಲೈಸನ್ಸ್ ನಂಬರ್ 777 ಅಂತೆ. ಹೀಗಾಗಿ ಚಿತ್ರಕ್ಕೆ '777 ಚಾರ್ಲಿ' ಎಂಬ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ. ರಕ್ಷಿತ್ ಶೆಟ್ಟಿ ಜೊತೆ ಕೆಲಸ ಮಾಡಿರುವ ಕಿರಣ್ ರಾಜ್ ಎಂಬುವವರು ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ಗೆ ಪರಿಚಿತವಾಗುತ್ತಿದ್ದಾರೆ.