Don't Miss!
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Automobiles ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್.. ಕಡಿಮೆ ಖರ್ಚಿನಲ್ಲಿ ಹೋಗಬಹುದು!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- News ಕರ್ನಾಟಕದಲ್ಲಿ ಮೋದಿ, ಯೋಗಿ, ಅಮಿತ್ ಶಾ, ಜೆಪಿ ನಡ್ಡಾ ಪ್ರಚಾರ: ಯಾವಾಗ, ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಿತ್ ಶೆಟ್ಟಿ ಎಲ್ಲೇ ಹೋದರೂ ರಶ್ಮಿಕಾ ಮಂದಣ್ಣ ಬಗ್ಗೆ ಪ್ರಶ್ನೆ ಪಕ್ಕಾ.!
Recommended Video
ಸಿಂಪಲ್ ಹುಡುಗ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವಿನ ಪ್ರೀತಿ ಬ್ರೇಕಪ್ ಆಗಿ ವರ್ಷಗಳೇ ಉರುಳಿವೆ. ಇಬ್ಬರ ಮಧ್ಯೆ ಅರಳಿದ್ದ ಪ್ರೇಮ ಮುದುಡಲು ಕಾರಣ ಏನು ಎಂಬುದಕ್ಕೆ ಅಂತೆ-ಕಂತೆ ಪುರಾಣಗಳಿವೆ ಹೊರತು ರಕ್ಷಿತ್ ಆಗಲಿ, ರಶ್ಮಿಕಾ ಆಗಲಿ ಬಾಯಿಬಿಟ್ಟು ಹೇಳಿಲ್ಲ.
ಹೀಗಾಗಿ, ಮೀಡಿಯಾ ಮುಂದೆ ರಶ್ಮಿಕಾ ಮಂದಣ್ಣ ಹಾಜರ್ ಆದಾಗೆಲ್ಲಾ ರಕ್ಷಿತ್ ಶೆಟ್ಟಿ ಬಗ್ಗೆ ಯಾರಾದರೂ ಪ್ರಶ್ನೆ ಕೇಳೇ ಕೇಳ್ತಾರೆ. ಹಾಗೇ, ರಕ್ಷಿತ್ ಶೆಟ್ಟಿ ಎಲ್ಲೇ ಹೋದರೂ ರಶ್ಮಿಕಾ ಮಂದಣ್ಣ ಬಗ್ಗೆ ಪ್ರಶ್ನೆ ಇದ್ದೇ ಇರುತ್ತೆ. ಮೊನ್ನೆ ಆಗಿದ್ದೂ ಇದೆ.!
ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ರಿಲೀಸ್ ಗೆ ರೆಡಿ ಆಗಿರೋದು ನಿಮಗೆಲ್ಲ ಗೊತ್ತೇ ಇದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಯಲ್ಲೂ 'ಅವನೇ ಶ್ರೀಮನ್ನಾರಾಯಣ' ಚಿತ್ರ ಬಿಡುಗಡೆ ಆಗಲಿದೆ. ಚಿತ್ರದ ಪ್ರಚಾರ ಸಲುವಾಗಿ ರಕ್ಷಿತ್ ಶೆಟ್ಟಿ ಚೆನ್ನೈ, ಹೈದರಾಬಾದ್ ಅಂತ ಬಿಜಿಯಾಗಿದ್ದಾರೆ.
ಚೆನ್ನೈ ಮತ್ತು ಹೈದರಾಬಾದ್ ನಲ್ಲಿ ರಕ್ಷಿತ್ ಶೆಟ್ಟಿಗೆ 'ಅವನೇ ಶ್ರೀಮನ್ನಾರಾಯಣ' ಜೊತೆಗೆ ರಶ್ಮಿಕಾ ಮಂದಣ್ಣ ಕುರಿತಾದ ಪ್ರಶ್ನೆಗಳೂ ತೂರಿ ಬರುತ್ತಿವೆ. ವೈಯುಕ್ತಿಕ ವಿಚಾರಗಳ ಬಗ್ಗೆ ತುಟಿಕ್ ಪಿಟಿಕ್ ಎನ್ನದ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ.
ರಕ್ಷಿತ್-ಶಾನ್ವಿ ನಡುವೆ ಏನೋ ನಡೀತಾ ಇದೆಯಂತೆ, ನಿಜಾನಾ..?
ಕ್ರಿಸ್ಮಸ್ ಬರ್ತಿರೋದ್ರಿಂದ ಸಾಂತಾ ಬಳಿ ''ರಶ್ಮಿಕಾ ಕನಸುಗಳೆಲ್ಲಾ ನನಸು ಆಗಲಿ ಎಂದು ಕೇಳಿಕೊಳ್ಳುತ್ತೇನೆ'' ಎಂದಿದ್ದಾರೆ ರಕ್ಷಿತ್ ಶೆಟ್ಟಿ.
ಅಂದ್ಹಾಗೆ, 'ಅವನೇ ಶ್ರೀಮನ್ನಾರಾಯಣ' ಕರ್ನಾಟಕದಾದ್ಯಂತ ಡಿಸೆಂಬರ್ 27 ರಂದು ಬಿಡುಗಡೆ ಆಗಲಿದೆ, ನೋಡಲು ನೀವು ರೆಡಿನಾ.?