Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಸೆಂಬ್ಲಿ ಚುನಾವಣಾ ಕಣಕ್ಕೆ ಸುಂಟರಗಾಳಿ ರಕ್ಷಿತಾ
ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಎಲ್ಲೋ ಒಂದು ಕ್ಷೇತ್ರದಿಂದ ತಾವು ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ. ಶ್ರೀರಾಮುಲು ಅವರ ಪಕ್ಷದಲ್ಲಿ ಈಗಾಗಲೆ ರಾಜಕೀಯದ ಓನಾಮಗಳನ್ನು ರಕ್ಷಿತಾ ಕಲಿತಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ತಮ್ಮ ಗ್ಲಾಮರ್ ಹಾಗೂ ಭಾಷಣಗಳ ಮೂಲಕ ಮತದಾರರನ್ನು ಸೆಳೆಯುವಲ್ಲಿ ರಕ್ಷಿತಾ ಯಶಸ್ವಿಯಾಗಿದ್ದರು.
ಮೊನ್ನೆ ಮೊನ್ನೆ ನಡೆದ ಬಿಎಸ್ಆರ್ ಪಕ್ಷದ 'ಪಾರ್ಟಿ ಮೀಟಿಂಗ್'ನಲ್ಲಿ ಅವರು ಮಾತನಾಡುತ್ತಿದ್ದರು. ಮುಂಬರುವ ವಿಧಾನಸಭೆ ಚುನಾವಣೆಗೆ ಬಿಎಸ್ಆರ್ ಪಕ್ಷದಿಂದ ಸ್ಪರ್ಧಿಸುವ ತಮ್ಮ ಆಸೆಯನ್ನು ವ್ಯಕ್ತಪಡಿಸಿದರು. ಬಿಎಸ್ಆರ್ ಪಕ್ಷದ ಮಹಿಳಾ ಘಟಕದ ಸಾರಥ್ಯವನ್ನೂ ವಹಿಸುವುದಗಿ ರಕ್ಷಿತಾ ಹೇಳಿದರು.
ತಾವಂತೂ ಚುನಾವಣಾ ಕಣಕ್ಕೆ ಧುಮುಕಲು ಸಿದ್ಧವಾಗಿದ್ದೇವೆ. ಇನ್ನು ಏನಿದ್ದರೂ ಶ್ರೀರಾಮುಲು ಅವರು ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದೇನೆ. 'ಸ್ವಾಭಿಮಾನಿ ಸಂಕಲ್ಪ ಯಾತ್ರೆ'ಯಲ್ಲೂ ರಕ್ಷಿತಾ ಪಾಲ್ಗೊಂಡು ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳಲಿದ್ದಾರೆ. ರಾಮನಗರದಿಂದ ಮಲೆನಾಡತನಕ ರಕ್ಷಿತಾ 'ಸುಂಟರಗಾಳಿ'ಯಂತೆ ಸುತ್ತಲಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಹತ್ತು ತಿಂಗಳುಗಳ ಕಾಲ ಸಮಯಾವಕಾಶವಿದೆ. ಕರ್ನಾಟಕ ರಾಜಕೀಯ ಕ್ಷೇತ್ರಕ್ಕೆ ಜಿಗಿಯುತ್ತಿರುವ ರಕ್ಷಿತಾ ಬಿರುಗಾಳಿ ಎಬ್ಬಿಸದಿದ್ದರೂ ಸುಂಟರಗಾಳಿಯಂತೂ ಎಬ್ಬಿಸುವುದಂತೂ ಗ್ಯಾರಂಟಿ ಎಂಬ ಮಾತುಗಳು ಕಿವಿಗೆ ಬೀಳುತ್ತಿವೆ.
ಈ ಹಿಂದೊಮ್ಮೆ ಗಾಲಿ ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲೇ ರಕ್ಷಿತಾ ಭೇಟಿ ಮಾಡಿದ್ದರು. ಅವರಿಂದ ಕಲಿಯುವುದು ಬಹಳಷ್ಟಿದೆ. ಅವರ ನಡವಳಿಕೆ ನನಗೆ ಹೊಸ ಸ್ಫೂರ್ತಿ ನೀಡಿದೆ. ಅವರ ಸಲಹೆ ಸೂಚನೆಗಳನ್ನು ಪಾಲಿಸುವುದಾಗಿ ಹೇಳಿಕೊಂಡಿದ್ದರು. ಈಗ ಅವೆಲ್ಲಕ್ಕೂ ಕಾಲ ಕೂಡಿಬಂದಿದೆ ಅನ್ನಿಸುತ್ತದೆ. (ಏಜೆನ್ಸೀಸ್)