Don't Miss!
- Technology
ಇನ್ಮುಂದೆ ನಿಮ್ಮ ಕೆಮ್ಮು ಮತ್ತು ಗೊರಕೆಗಳನ್ನು ಕೂಡ ಟ್ರ್ಯಾಕ್ ಮಾಡಲು ಗೂಗಲ್ ಪ್ಲಾನ್!
- Automobiles
ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!
- Sports
RCB vs RR: ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ ಹೀನಾಯ ಸೋಲಿಗೆ ಈ 6 ಆಟಗಾರರೇ ಕಾರಣ!
- News
ಪಂಕ್ಚರ್ ಅಂಗಡಿ ಅನಕ್ಷರಸ್ಥನಿಂದ ವರ್ಷಕ್ಕೆ 7 ಕೋಟಿ ಸಂಪಾದನೆ
- Lifestyle
Today Rashi Bhavishya: ಶನಿವಾರದ ದಿನ ಭವಿಷ್ಯ: ಈ ರಾಶಿಯ ವ್ಯಾಪಾರಿಗಳಿಗೆ ಅದೃಷ್ಟದ ದಿನ
- Finance
ಕಾರು, ಬೈಕು ಖರೀದಿಗೆ ಮುನ್ನ ಗಮನಿಸಿ, ಜೂನ್ 1ರಿಂದ ವಿಮೆ ಮೊತ್ತ ಏರಿಕೆ
- Education
KCET 2022 Syllabus : 2022ರ ಸಿಇಟಿ ಪರೀಕ್ಷೆಯ ಪಠ್ಯಕ್ರಮ ರಿಲೀಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುದೀಪ್ಗೆ ರಕ್ಷಿತ್ ಶೆಟ್ಟಿ ನಿರ್ದೇಶನ: ಎಲ್ಲಿ ತನಕ ಬಂತು ಸಿನಿಮಾ!
ನಟ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರ ಜೂನ್ 10ಕ್ಕೆ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಮುಗಿಯುತ್ತಿದ್ದ ಹಾಗೆ ರಕ್ಷಿತ್ ಶೆಟ್ಟಿಯ 'ಸಪ್ತಸಾಗರದಾಚೆ ಎಲ್ಲೋ' ಸಿನಿಮಾ ಬರಲಿದೆ. ಈ ಚಿತ್ರದ ಕೆಲಸಗಳು ಕೂಡ ಬಹುತೇಕ ಮುಗಿದಿದ್ದು 'ಚಾರ್ಲಿ' ಬಳಿಕ ಈ ಸಿನಿಮಾ ಹೆಚ್ಚು ಸಮಯ ತೆಗೆದುಕೊಳ್ಳದೆ ತೆರೆಗೆ ಬರಲಿದೆ.
ಇದರ ನಡುವೆ ರಕ್ಷಿತ್ ಶೆಟ್ಟಿ ಮತ್ತು ಸುದೀಪ್ ಸಿನಿಮಾ ಏನಾಯ್ತು ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ. ಸುದೀಪ್ಗಾಗಿ ಸಿನಿಮಾ ಮಾಡುವುದಾಗಿ ನಟ ರಕ್ಷಿತ್ ಶೆಟ್ಟಿ ಹೇಳಿಕೊಂಡಿದ್ದರು. ಕಥೆ ರೆಡಿ ಇದೆ. ಆದರೆ ಇದನ್ನು ಸುದೀಪ್ ಒಪ್ಪಿದರಾ, ಇಬ್ಬರು ಒಟ್ಟಿಗೆ ಸಿನಿಮಾ ಮಾಡುವುದು ಪಕ್ಕಾನಾ ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳು ಇವೆ.
ಈಗ ಇದಕ್ಕೆಲ್ಲಾ ಉತ್ತರ ಸಿಕ್ಕಿದೆ. ಗಾಂಧಿ ನಗರದಲ್ಲಿ ಈ ಬಗ್ಗೆ ಹೊಸ ಸುದ್ದಿ ಹರಿದಾಡುತ್ತಾ ಇದೆ. ನಟ ರಕ್ಷಿತ್ ಶೆಟ್ಟಿ '777 ಚಾರ್ಲಿ' ಸಿನಿಮಾ ರಿಲೀಸ್ ಬಳಿಕ ಸುದೀಪ್ ಸಿನಿಮಾದ ಕೆಲಸಗಳನ್ನು ಶುರು ಮಾಡಲಿದ್ದಾರಂತೆ. ಸ್ಕ್ರಿಪ್ಟ್ ಕೆಲಸಗಳನ್ನು ಅಂತಿಮಗೊಳಿಸಳಿದ್ದಾರಂತೆ.
ಸುದೀಪ್
ಅಭಿಮಾನಿ
ಹುಚ್ಚಾಟ:
ಆತ್ಮ
ಹತ್ಯೆ
ಮಾಡಿಕೊಳ್ಳುತ್ತೇನೆ
ಎಂದು
ಪೋಸ್ಟ್!
ಇನ್ನು ಈ ಹಿಂದೆ ಸುದೀಪ್ಗೆ ಸಿನಿಮಾ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಮಾತನಾಡಿದ್ದರು. '777 ಚಾರ್ಲಿ' ಬಿಡುಗಡೆಯ ನಂತರ, 'ಸಪ್ತಸಾಗರದಾಚೆ ಎಲ್ಲೊ' ಸಿನಿಮಾ ಇದೆ. ಅದರ ನಂತರ ರಿಚ್ಚಿ ಸಿನಿಮಾ ಶುರುವಾಗಲಿದೆ. ಆ ನಂತರ 'ಪುಣ್ಯಕೋಟಿ' ಸಿನಿಮಾ ಪ್ರಾರಂಭವಾಗಲಿದೆ. ಸುದೀಪ್ ಅವರಿಗಾಗಿ ಕತೆ ತಯಾರು ಮಾಡುತ್ತಿದ್ದೇನೆ. ನನ್ನ ಕೆಲಸಗಳು ಪೂರ್ಣಗೊಂಡ ಬಳಿಕ ಸುದೀಪ್ ಜೊತೆ ಸಿನಿಮಾ ಪ್ರಾರಂಭಿಸುತ್ತೇನೆ ಎಂದಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ದೇಶನದಲ್ಲಿ 'ಥಗ್ಸ್ ಆಫ್ ಮಾಲ್ಗುಡಿ' ಹೆಸರಿನ ಸಿನಿಮಾದಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಸಿನಿಮಾ ಈಗ ಸುದೀಪ್ ಅವರಿಗೆ ರಕ್ಷಿತ್ ಶೆಟ್ಟ ಮಾಡಲು ಹೊರಟಿರುವು 'ಥಗ್ಸ್ ಆಫ್ ಮಾಲ್ಗುಡಿ' ಕಥೆಯಾ ಅಥವಾ ಬೇರೆ ಕಥೆಯ ಎನ್ನುವುದನ್ನು ಅವರೇ ಸ್ಪಷ್ಟ ಪಡಿಸಬೇಕು.