Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Automobiles
ಡಿಸೆಂಬರ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಮಹೀಂದ್ರಾ
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಚಾರ್ಲಿ' ಜೊತೆ ಕಾಶ್ಮೀರಕ್ಕೆ ಹೊರಟ ನಟ ರಕ್ಷಿತ್ ಶೆಟ್ಟಿ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.
ಲಾಕ್ ಡೌನ್ ಬಳಿಕ ಅಕ್ಟೋಬರ್ ನಿಂದ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ಈಗಾಗಲೇ ಬೆಂಗಳೂರು, ಕೊಡೈಕೆನಾಲ್ ಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿದೆ. ಇದೀಗ ರಕ್ಷಿತ್ ಮತ್ತು ತಂಡ ಚಾರ್ಲಿ ಜೊತೆ ಕಾಶ್ಮೀರಕ್ಕೆ ಹೊರಟಿದ್ದಾರೆ.
ರಕ್ಷಿತ್ ಶೆಟ್ಟಿಯಿಂದ ಬಿಗ್ ಅನೌನ್ಸ್ ಮೆಂಟ್; '777 ಚಾರ್ಲಿ'ಗೆ ಎಂಟ್ರಿ ಕೊಟ್ಟ ತಮಿಳು ಸಿಂಹ
ಹೌದು, '777 ಚಾರ್ಲಿ' ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯಲಿದೆ. ಚಿತ್ರೀಕರಣದ ಕೊನೆಯ ಹಂತಕ್ಕೆ ಬಂದಿರುವ ಸಿನಿಮಾತಂಡ ಸದ್ಯ ಕಾಶ್ಮೀರಕ್ಕೆ ಪಯಣ ಬೆಳೆಸಿದೆ. ನವೆಂಬರ್ 26ರಿಂದ ಕಾಶ್ಮೀರದಲ್ಲಿ ಚಿತ್ರೀಕರಣ ಶುರು ಮಾಡಲಿದೆ ಚಾರ್ಲಿತಂಡ. ಈ ಬಗ್ಗೆ ಸಿನಿಮಾತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ.
ಇತ್ತೀಚಿಗಷ್ಟೆ ಸಿನಿಮಾತಂಡ ಚಿತ್ರಕ್ಕೆ ತಮಿಳಿನ ಖ್ಯಾತ ನಟ ಬಾಬಿ ಸಿಂಹ ಎಂಟ್ರಿ ಕೊಟ್ಟಿರುವ ಬಗ್ಗೆ ಬಹಿರಂಗಪಡಿಸಿದ್ದಾರೆ. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಾರ್ಲಿಯಲ್ಲಿ ಬಾಬಿ ಸಿಂಹ ನಟಿಸುತ್ತಿರುವ ಬಗ್ಗೆ ರಿವೀಲ್ ಮಾಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ. ನಟ ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
ರಕ್ಷಿತ್ ಬಳಿ '777 ಚಾರ್ಲಿ' ಸಿನಿಮಾ ಜೊತೆಗೆ 'ಪುಣ್ಯಕೋಟಿ', 'ಸಪ್ತ ಸಾಗರದಾಚೆ', 'ಕಿರಿಕ್ ಪಾರ್ಟಿ-2' ಮತ್ತು ಇನ್ನು ಹೆಸರಿಡದ ಒಂದು ಸಿನಿಮಾವಿದೆ. ಈ ಸಿನಿಮಾ ಬಳಿಕ ರಕ್ಷಿತ್ ಯಾವ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ ಎಂದು ಕುತೂಹಲ ಮೂಡಿಸಿದೆ.