Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಗಿಫ್ಟ್
Recommended Video
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಕಿರಿಕ್ ಸ್ಟಾರ್ ಇಂದು 36ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೆ ರಕ್ಷಿತ್ ಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.
ರಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ರಕ್ಷಿತ್ ಅಭಿಮಾನಿಗಳಿಗೆ ಸಾಕಷ್ಟು ಗಿಫ್ಟ್ ಗಳು ಕಾದಿವೆ. ಈಗಾಗಲೆ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಪೋಸ್ಟರ್ ಮತ್ತು '777 ಚಾರ್ಲಿ' ಚಿತ್ರದ ಎರಡು ಪೋಸ್ಟರ್ ಗಳು ರಿಲೀಸ್ ಮಾಡಲಾಗಿದೆ.
ಮತ್ತೆ ಸಾಮಾಜಿಕ ಜಾಲತಾಣಕ್ಕೆ ಬರ್ತಿದ್ದಾರೆ ರಕ್ಷಿತ್ ಶೆಟ್ಟಿ
ಇಷ್ಟೆಯಲ್ಲದೆ ಬಹುನಿರೀಕ್ಷೆಯ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಟೀಸರ್ ಕೂಡ ಇಂದು ಸಂಜೆ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಇದೆಲ್ಲದರ ಜೊತೆಗೆ ರಕ್ಷಿತ್ ಸಾಮಾಜಿಕ ಜಾಲತಾಣಕ್ಕೆ ಮತ್ತೆ ಪಾವಸ್ ಆಗಿದ್ದಾರೆ. ಮುಂದೆ ಓದಿ..
ಅವನೇ ಶ್ರೀಮನ್ನಾರಾಯಣ ಪೋಸ್ಟರ್ ರಿಲೀಸ್
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಇಂಟ್ರಸ್ಟಿಂಗ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಿತ್ರಕ್ಕೆ ಸಚಿನ್ ರವಿ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ರಕ್ಷಿತ್ ಪೊಲೀಸ್ ಆಗಿ ಮಿಂಚಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ರಕ್ಷಿತ್ ಗನ್ ಹಿಡಿದು ಓಡುತ್ತಿದ್ದಾರೆ. ಇಂಟ್ರಸ್ಟಿಂಗ್ ಆಗಿರುವ ಈ ಪೋಸ್ಟರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಸಂಜೆ ಟೀಸರ್ ರಿಲೀಸ್
ಅವನೇ ಶ್ರೀಮನ್ನಾರಾಯಣ ಚಿತ್ರದ ಟೀಸರ್ ಸಂಜೆ ರಿಲೀಸ್ ಮಾಡಲಾಗುತ್ತಿದೆ. ಈಗಾಗಲೆ ಚಿತ್ರದಿಂದ ಪುಟ್ಟ ಟೀಸರ್ ಅನ್ನು ರಿಲೀಸ್ ಮಾಡಲಾಗಿದೆ. ಇಂದು ಸಿಂಪಲ್ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಎರಡನೆ ಟೀಸರ್ ರಿಲೀಸ್ ಆಗುತ್ತಿದೆ. ರಿಕ್ಷಿತ್ ಅಭಿಮಾನಿಗಳ ಮುಂದೆ ಬರದೆ ಎರಡು ವರ್ಷಗಳೆ ಆಗಿವೆ. ಹಾಗಾಗಿ ರಕ್ಷಿತ್ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು.
'ಗೋಧಿ ಬಣ್ಣ ಸಾಧಾರಣ ಮೈ ಕಟ್ಟು' ಚಿತ್ರಕ್ಕೆ ಮೂರು ವರ್ಷ
ಅವನೇ ಶ್ರೀಮನ್ನಾರಾಯಣ ಚಿತ್ರೀಕರಣ ಮುಕ್ತಾಯ
ಅವನೇ ಶ್ರೀ ಮನ್ನಾರಾಯಣ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ಕೆಸದಲ್ಲಿ ನಿರತವಾಗಿದೆ. ಬರೋಬ್ಬರಿ 600 ದಿನಗಳ ಚಿತ್ರೀಕರಣ ಮಾಡಿದ ಅವನೇ ಶ್ರೀಮನ್ನಾರಾಯಣ ಇತ್ತೀಚಿಗಷ್ಟೆ ಕುಂಬಳಕಾಯಿ ಒಡೆದಿದೆ. ಚಿತ್ರದಲ್ಲಿ ರಕ್ಷಿತ್ ಗೆ ನಾಯಕಿಯಾಗಿ ಶಾನ್ವಿ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ.
'777 ಚಾರ್ಲಿ' ಪೋಸ್ಟರ್ ರಿಲೀಸ್
ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷೆಯ '777 ಚಾರ್ಲಿ' ಚಿತ್ರದ ಇಂಟ್ರಸ್ಟಿಂಗ್ ಪೋಸ್ಟರ್ ರಿಲೀಸ್ ಆಗಿದೆ. ರಕ್ಷಿತ್ ವಿಶೇಷವಾದ ಬೈಕ್ ನಲ್ಲಿ ಪ್ರೀತಿಯ ನಾಯಿ ಜೊತೆ ಏಕಾಂಗಿಯಾಗಿ ಹೋಗುತ್ತಿರುವ ಪೋಸ್ಟರ್ ಇದಾಗಿದೆ. ಚಿತ್ರದಿಂದ ರಿಲೀಸ್ ಆದ ಮೂರನೆ ಪೋಸ್ಟರ್ ಇದಾಗಿದೆ. ಕಿರಣ್ ರಾಜ್ ನಿರ್ದೇಶನದ ಚಿತ್ರ. ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ '777 ಚಾರ್ಲಿ' ಚಿತ್ರ ಚಿತ್ರಾಭಿಮಾನಿಗಳ ನಿರೀಕ್ಷೆಯ ಚಿತ್ರವಾಗಿದೆ.
ಆಗಸ್ಟ್ ಗೆ 'ಅವನೇ ಶ್ರೀಮನ್ನಾರಾಯಣ' ಬರೋದು ಪಕ್ಕಾ
ಸಾಮಾಜಿಕ ಜಾಲತಾಣಕ್ಕೆ ಮರಳಿದ ರಕ್ಷಿತ್
ಕಿರಿಕ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು ಸಾಮಾಜಿಕ ಜಾಲತಾಣಕ್ಕೆ ಮತ್ತೆ ವಾಪಸ್ ಆಗಿದ್ದಾರೆ. ಕೆಲವು ಕಾರಣಗಳಿಂದ ಸುಮಾರು ತಿಂಗಳುಗಳಿಂದ ಸಾಮಾಜಿಕ ಜಾಲತಾಣದಿಂದ ಹಿಂದೆ ಸರಿದಿದ್ದ ರಕ್ಷಿತ್ ಇಂದು ಹುಟ್ಟುಹಬ್ಬದ ಪ್ರಯುಕ್ತ ಮತ್ತೆ ವಾಪಸ್ ಆಗಿದ್ದಾರೆ. ಇನ್ಮುಂದೆ ರಕ್ಷಿತ್ ಅಭಿನಯದ ಸಿನಿಮಾಗಳ ಸಂಪೂರ್ಣ ಮಾಹಿತಿ ರಕ್ಷಿತ್ ಪೇಜ್ ನಲ್ಲಿ ಸಿಗಲಿದೆ.