Just In
Don't Miss!
- Sports
'ವೈಟ್ಬಾಲ್ ತಂಡಗಳಲ್ಲಿ ಅಯ್ಯರ್, ಸ್ಯಾಮ್ಸನ್ ಬದಲು ಪಂತ್ ಆಡಿಸಬೇಕು'
- News
ಮಮತಾ ಭಾಷಣದ ಮಧ್ಯೆ ಜೈ ಶ್ರೀರಾಮ ಘೋಷಣೆ; ಕೋಪದಲ್ಲೇ ಭಾಷಣ ಆರಂಭಿಸಿದ ದೀದಿ
- Automobiles
2021ರ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ ರಕ್ಷಿತ್ ಶೆಟ್ಟಿ 'ಪುಣ್ಯಕೋಟಿ'
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ ಅವನೇ ಶ್ರೀಮನ್ನಾರಾಯಣ ಮತ್ತು '777 ಚಾರ್ಲಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಚಿತ್ರೀಕರಣ ಮುಗಿಸಿ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ ರಕ್ಷಿತ್. 'ಅವನೇ ಶ್ರೀಮನ್ನಾರಾಯಣ' ಚಿತ್ರ ಅದ್ಧೂರಿಯಾಗಿ ತೆರೆಗೆ ಬರುತ್ತಿರವ ಪ್ಲಾನ್ ಮಾಡಿದೆ ಚಿತ್ರತಂಡ.
ಕನ್ನಡ ಮಾತ್ರವಲ್ಲದೆ ಐದು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಇದರ ಜೊತೆಗೆ '777 ಚಾರ್ಲಿ' ಚಿತ್ರ ಕೂಡ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಆ ನಂತರ ರಕ್ಷಿತ್ ದೊಡ್ಡ ಬಜೆಟ್ ನ ಚಿತ್ರವೊಂದನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಹೌದು ಪುಣ್ಯಕೋಟಿ ಚಿತ್ರದಲ್ಲಿ ಅಭಿನಯ ಮಾತ್ರವಲ್ಲದೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತಿದ್ದಾರೆ.
'ಶ್ರೀಮನ್ನಾರಾಯಣ'ನ ಬಗ್ಗೆ ತರುಣ್ ಸುಧೀರ್ ಮಾಡಿದ್ದು ವ್ಯಂಗ್ಯನಾ ಮೆಚ್ಚುಗೆನಾ?
ಇದೆಲ್ಲ ಹಳೆ ಮ್ಯಾಟ್ರು ಆದ್ರೆ ಹೊಸ ವಿಚಾರ ಅಂದ್ರೆ ಈ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆಯಂತೆ. ಸುಮಾರು 100 ಕೋಟಿ ವೆಚ್ಚದ ಸಿನಿಮಾ ಇದಾಗುವ ಸಾಧ್ಯತೆ ಇದೆಯಂತೆ. ಜೊತೆಗೆ ಈ ಸಿನಿಮಾ ಸುಮಾರು 300ವರ್ಷಗಳ ಹಿಂದಿನ ಕತೆಯಂತೆ. ಹಾಗಾಗಿ 300 ವರ್ಷಗಳ ಹಿಂದಿನ ಬ್ಯಾಗ್ರೌಂಡ್ ನಿರ್ಮಿಸಲು ಸೆಟ್ ಬಗ್ಗೆ ಪ್ಲಾನ್ ಮಾಡುತ್ತಿದ್ದಾರಂತೆ ರಕ್ಷಿತ್.
300 ವರ್ಷಗಳ ಹಳೆಯ ಕಥೆ ಅಂತ ಆದ್ರೆ ಹೇಗಿರಲಿದೆ ಸಿನಿಮಾ ಎನ್ನುವ ಕುತೂಹಲ ಈಗಾಗಲೆ ಅಭಿಮಾನಿಗಳಲ್ಲಿದೆ. ಒಂದು ಯುದ್ಧದ ಸನ್ನಿವೇಶವನ್ನು ಆಧರಿಸಿದ ಸಿನಿಮಾ ಇದಾಗಲಿದೆಯಂತೆ. 'ಅವನೇ ಶ್ರೀಮನ್ನಾರಾಯಣ' ಸಿನಿಮಾ ರಿಲೀಸ್ ಆದ ನಂತರ ಪುಣ್ಯಕೋಟಿ ಕೈಗೆತ್ತಿಕೊಳ್ಳಲಿದ್ದಾರೆ ರಕ್ಷಿತ್. ಎಲ್ಲವು ಅಂದುಕೊಂಡಂತೆ ಅಂದ್ರೆ ಇದೆ ವರ್ಷದ ಕೊನೆಯಲ್ಲಿ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.