Don't Miss!
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಸುದ್ದಿ ಕೇಳಿ ನಟಿ ರಕ್ಷಿತಾ ಹೃದಯ ಛಿದ್ರ
ಹಿರಿಯ ಪತ್ರಕರ್ತೆ, ಲಂಕೇಶ್ ಪತ್ರಿಕೆ ಸಂಪಾದಕಿ, ವಿಚಾರವಾದಿ ಗೌರಿ ಲಂಕೇಶ್ (55) ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ನಿವಾಸದ ಮುಂಭಾಗದಲ್ಲಿಯೇ ಮಂಗಳವಾರ (ಸೆಪ್ಟೆಂಬರ್ 5) ಸಂಜೆ ಗುಂಡಿನ ದಾಳಿ ನಡೆಸಿ ಕೊಲ್ಲಲಾಗಿದೆ.
ನಿರ್ಭೀತ ಪತ್ರಕರ್ತೆ ಗೌರಿ ಲಂಕೇಶ್ ರವರ ಹತ್ಯೆಯ ಸುದ್ದಿ ಕೇಳಿ ನಟಿ ರಕ್ಷಿತಾ ಪ್ರೇಮ್ ಹೃದಯ ಛಿದ್ರವಾಗಿದೆ.
''ಗೌರಿ ಲಂಕೇಶ್ ರವರ ಹತ್ಯೆ ನಿಜಕ್ಕೂ ಹೃದಯ ವಿದ್ರಾವಕ ಘಟನೆ. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಅದರಲ್ಲೂ, ಬೆಂಗಳೂರು ನಗರ ತುಂಬಾ ಸುರಕ್ಷಿತ ಎಂದು ಎಲ್ಲರೂ ಭಾವಿಸುತ್ತಾರೆ. ಅಂಥದ್ರಲ್ಲಿ ಒಬ್ಬರ ಹತ್ಯೆ ಆಗಿದೆ. ಅದು ಆಕೆಯ ಮನೆಯ ಮುಂದೆ. ನಮಗೆ ರಕ್ಷಣೆ ಇದ್ಯಾ ಅನ್ನೋದೇ ಈಗ ಪ್ರಶ್ನೆಯಾಗಿದೆ. ಗೌರಿ ಅಮ್ಮ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಗೌರಿ ಲಂಕೇಶ್ ರವರ ಹತ್ಯೆಗೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಹಲವು ಗಣ್ಯರು ಕೂಡ ಗೌರಿ ಲಂಕೇಶ್ ಹತ್ಯೆಯನ್ನ ಖಂಡಿಸಿದ್ದಾರೆ.