Don't Miss!
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮ್ ಚರಣ್ ಗೆ ದಿಢೀರ್ ಅಂತಹ ಇಂತಹ ಆಸೆ ಯಾಕೆ.?
ರಾಜಮೌಳಿ ಜೊತೆ ಸಿನಿಮಾ ಮಾಡ್ಬೇಕು ಎಂಬ ಆಸೆ ಅನೇಕರಿಗೆ ಇರುತ್ತೆ. ಬಾಹುಬಲಿ ಸಿನಿಮಾ ಆದ್ಮೆಲಂತೂ ಬಾಲಿವುಡ್ ಸ್ಟಾರ್ ಗಳು ರಾಜಮೌಳಿಗಾಗಿ ಕಾಯ್ತಿದ್ದಾರೆ. ಹೀಗಿರುವಾಗ, ರಾಜಮೌಳಿ ಜೊತೆ ಕೆಲಸ ಮಾಡಿದ ನಟ ಈಗ ಬಾಲಿವುಡ್ ಡೈರೆಕ್ಟರ್ ಗಾಗಿ ಕಾಯ್ತಿದ್ದಾರಂತೆ.
ಹೌದು, ತೆಲುಗು ಸೂಪರ್ ಹಿಟ್ ಸಿನಿಮಾ 'ರಂಗಸ್ಥಲಂ' ಚಿತ್ರದ ಯಶಸ್ಸಿನಲ್ಲಿರುವ ನಟ ರಾಮ್ ಚರಣ್ ಬಾಲಿವುಡ್ ನಿರ್ದೇಶಕ ರಾಜ ಕುಮಾರ್ ಹಿರಾನಿ ಜೊತೆ ಸಿನಿಮಾ ಮಾಡ್ಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗಷ್ಟೆ ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ಚರಣ್ ''ನಾನು ಸಹ 2013 ರಲ್ಲಿ "ಝಂಜೀರ್" ಸಿನಿಮಾದ ಮೂಲಕ ಬಾಲಿವುಡ್ ತೆರೆಯಲ್ಲಿ ಕಾಣಿಸಿಕೊಂಡಿದ್ದೇನೆ. ಹಾಗೂ ನಾನು ಬಾಲಿವುಡ್ ಚಿತ್ರರಂಗದಲ್ಲಿ ನನ್ನ ಸ್ಥಾನ ಭದ್ರ ಪಡಿಸಿಕೊಳ್ಳುವುದರ ಮೂಲಕ ರಾಷ್ಟ್ರಿಯ ಮಟ್ಟದಲ್ಲಿ ಹೆಸರು ಮಾಡಬೇಕೆನ್ನುವುದು ನನ್ನ ಆಸೆ'' ಎಂದು ಬಯಕೆ ಹಂಚಿಕೊಂಡಿದ್ದಾರೆ.
''ಈ ನಿಟ್ಟಿನಲ್ಲಿ ನೆಚ್ಚಿನ ನಿರ್ದೇಶಕರಾಗಿರುವ ರಾಜ್ ಕುಮಾರ್ ಹಿರಾನಿ ಸರ್ ಮತ್ತು ಅವರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ'' ಎಂದು ಸಂತಸ ಹೊರಹಾಕಿದ್ದಾರೆ.
"ಬಾಹುಬಲಿ" ಖ್ಯಾತಿಯ ನಟ ಪ್ರಭಾಸ್ "ಸಾಹೋ ಮತ್ತು ಮಲಯಾಳಂ ನಟ ದುಲ್ಕರ್ ಸಲ್ಮಾನ್ "ಕರ್ವಾನ್" ಸಿನಿಮಾಗಳ ಮೂಲಕ ಬಾಲಿವುಡ್ ಚಿತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ.