Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮ್ ಚರಣ್ ಗೆ ದಿಢೀರ್ ಅಂತಹ ಇಂತಹ ಆಸೆ ಯಾಕೆ.?
ರಾಜಮೌಳಿ ಜೊತೆ ಸಿನಿಮಾ ಮಾಡ್ಬೇಕು ಎಂಬ ಆಸೆ ಅನೇಕರಿಗೆ ಇರುತ್ತೆ. ಬಾಹುಬಲಿ ಸಿನಿಮಾ ಆದ್ಮೆಲಂತೂ ಬಾಲಿವುಡ್ ಸ್ಟಾರ್ ಗಳು ರಾಜಮೌಳಿಗಾಗಿ ಕಾಯ್ತಿದ್ದಾರೆ. ಹೀಗಿರುವಾಗ, ರಾಜಮೌಳಿ ಜೊತೆ ಕೆಲಸ ಮಾಡಿದ ನಟ ಈಗ ಬಾಲಿವುಡ್ ಡೈರೆಕ್ಟರ್ ಗಾಗಿ ಕಾಯ್ತಿದ್ದಾರಂತೆ.
ಹೌದು, ತೆಲುಗು ಸೂಪರ್ ಹಿಟ್ ಸಿನಿಮಾ 'ರಂಗಸ್ಥಲಂ' ಚಿತ್ರದ ಯಶಸ್ಸಿನಲ್ಲಿರುವ ನಟ ರಾಮ್ ಚರಣ್ ಬಾಲಿವುಡ್ ನಿರ್ದೇಶಕ ರಾಜ ಕುಮಾರ್ ಹಿರಾನಿ ಜೊತೆ ಸಿನಿಮಾ ಮಾಡ್ಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗಷ್ಟೆ ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ ಚರಣ್ ''ನಾನು ಸಹ 2013 ರಲ್ಲಿ "ಝಂಜೀರ್" ಸಿನಿಮಾದ ಮೂಲಕ ಬಾಲಿವುಡ್ ತೆರೆಯಲ್ಲಿ ಕಾಣಿಸಿಕೊಂಡಿದ್ದೇನೆ. ಹಾಗೂ ನಾನು ಬಾಲಿವುಡ್ ಚಿತ್ರರಂಗದಲ್ಲಿ ನನ್ನ ಸ್ಥಾನ ಭದ್ರ ಪಡಿಸಿಕೊಳ್ಳುವುದರ ಮೂಲಕ ರಾಷ್ಟ್ರಿಯ ಮಟ್ಟದಲ್ಲಿ ಹೆಸರು ಮಾಡಬೇಕೆನ್ನುವುದು ನನ್ನ ಆಸೆ'' ಎಂದು ಬಯಕೆ ಹಂಚಿಕೊಂಡಿದ್ದಾರೆ.
''ಈ ನಿಟ್ಟಿನಲ್ಲಿ ನೆಚ್ಚಿನ ನಿರ್ದೇಶಕರಾಗಿರುವ ರಾಜ್ ಕುಮಾರ್ ಹಿರಾನಿ ಸರ್ ಮತ್ತು ಅವರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ'' ಎಂದು ಸಂತಸ ಹೊರಹಾಕಿದ್ದಾರೆ.
"ಬಾಹುಬಲಿ" ಖ್ಯಾತಿಯ ನಟ ಪ್ರಭಾಸ್ "ಸಾಹೋ ಮತ್ತು ಮಲಯಾಳಂ ನಟ ದುಲ್ಕರ್ ಸಲ್ಮಾನ್ "ಕರ್ವಾನ್" ಸಿನಿಮಾಗಳ ಮೂಲಕ ಬಾಲಿವುಡ್ ಚಿತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ.