Don't Miss!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೂಗತ ದೊರೆಯ ಜೀವನ ಕತೆಯಲ್ಲಿ ಉಪೇಂದ್ರ ನಾಯಕ: ಸ್ಟಾರ್ ನಿರ್ದೇಶಕನಿಂದ ಆಕ್ಷನ್-ಕಟ್
ಒಂದು ಕಾಲದಲ್ಲಿ ಭಾರತೀಯ ಸಿನಿಮಾದ ಭಾಷ್ಯ ಬದಲಾಯಿಸಿದ್ದ ರಾಮ್ ಗೋಪಾಲ್ ವರ್ಮಾ ಇತ್ತೀಚಿನ ಕೆಲ ವರ್ಷಗಳಲ್ಲಿ ಸಿ ಗ್ರೇಡ್ ಸಿನಿಮಾಗಳನ್ನಷ್ಟೆ ಮಾಡಿದ್ದಾರೆ.
ಆದರೆ ಇದೀಗ ನಟ ಉಪೇಂದ್ರ ಜೊತೆಗೂಡಿ ಮತ್ತೆ ತಮ್ಮ ಹಳೆ ಫಾರ್ಮ್ಗೆ ಮರಳುವ ಸಿದ್ಧತೆ ಆರಂಭಿಸಿದ್ದಾರೆ ವರ್ಮಾ. ಉಪೇಂದ್ರ ಜೊತೆ ಹೊಸ ಸಿನಿಮಾ ಒಂದನ್ನು ಘೋಷಿಸಿರುವ ರಾಮ್ ಗೋಪಾಲ್ ವರ್ಮಾ ಸಿನಿಮಾದ ಟೈಟಲ್ ಪೋಸ್ಟರ್ ಸಹ ಬಿಡುಗಡೆ ಮಾಡಿದ್ದಾರೆ.
Upendra Hijab Look: ಹಿಜಾಬ್ ಧರಿಸಿದ ನಟ ಉಪೇಂದ್ರ: ಫೋಟೊ ವೈರಲ್!
Recommended Video
ಉಪೇಂದ್ರ ಹಾಗೂ ರಾಮ್ ಗೋಪಾಲ್ ವರ್ಮಾ ಒಟ್ಟಾಗಿ ಬೆಂಗಳೂರಿನ ಭೂಗತ ದೊರೆಯ ಜೀವನವನ್ನು ಸಿನಿಮಾ ಮಾಡಲಿದ್ದಾರೆ. ಸಿನಿಮಾಕ್ಕೆ 'R' ಎಂದು ಹೆಸರಿಡಲಾಗಿದೆ.
2020ರಲ್ಲಿ ಮೃತಪಟ್ಟ ಮಾಜಿ ಭೂಗತ ದೊರೆ, ಜೈ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಜೀವನವನ್ನು ತೆರೆಗೆ ತರುತ್ತಿದೆ ಈ ಜೋಡಿ. ನಟ ಉಪೇಂದ್ರ, ಮುತ್ತಪ್ಪ ರೈ ಪಾತ್ರದಲ್ಲಿ ಮಿಂಚಲಿದ್ದಾರೆ.
Kabza: 'ಕಬ್ಜ' ಅಡ್ಡಕ್ಕೆ ಎಂಟ್ರಿ ಕೊಟ್ಟ ತೆಲುಗು ನಟರು!
ತಾವು ಮುತ್ತಪ್ಪ ರೈ ಜೀವನವನ್ನು ಸಿನಿಮಾ ಮಾಡುವುದಾಗಿ ಕೆಲ ವರ್ಷಗಳ ಹಿಂದೆಯೇ ರಾಮ್ ಗೋಪಾಲ್ ವರ್ಮಾ ಘೋಷಿಸಿದ್ದರು. ಭೂಗತ ಲೋಕದ ಗಾಡ್ ಫಾದರ್ ಮುತಪ್ಪ ರೈ ಎಂದೆಲ್ಲಾ ಹೇಳಿಕೆಗಳನ್ನು ರಾಮ್ ಗೋಪಾಲ್ ವರ್ಮಾ ನೀಡಿದ್ದರು. ಮುತ್ತಪ್ಪ ರೈ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ನಟಿಸಲಿದ್ದಾರೆ ಎಂದೆಲ್ಲ ನಿಶ್ಚಯವಾಗಿತ್ತು. ಆದರೆ ಸಿನಿಮಾ ಸೆಟ್ಟೇರಲಿಲ್ಲ. ಈಗ ಮುತ್ತಪ್ಪ ರೈ ಪಾತ್ರದಲ್ಲಿ ಉಪೇಂದ್ರ ನಟಿಸಲಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಉಪೇಂದ್ರ ಜೊತೆಗೆ ಫೋಟೊ ಒಂದನ್ನು ರಾಮ್ ಗೋಪಾಲ್ ವರ್ಮಾ ಪ್ರಕಟಿಸಿದ್ದರು. ಆಗಲೇ ಈ ಇಬ್ಬರು ಒಟ್ಟಿಗೆ ಸಿನಿಮಾ ಮಾಡಲಿದ್ದಾರೆಂಬ ಸುಳಿವು ದೊರಕಿತ್ತು. ಆದರೆ ಮುತ್ತಪ್ಪ ರೈ ಜೀವನವನ್ನು ಸಿನಿಮಾ ಮಾಡಲಿದ್ದಾರೆ ಎಂಬುದರ ಬಗ್ಗೆ ಅನುಮಾನಗಳಿದ್ದವು, ಅದೀಗ ಸ್ಪಷ್ಟವಾಗಿದೆ.
ಉಪೇಂದ್ರ ಹೊಸ ಸಿನಿಮಾ ಹೆಸರಿನ ಅರ್ಥವೇನು?
ಉಪೇಂದ್ರ-ವರ್ಮಾ ಸಿನಿಮಾ ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡು ಬಿಡುಗಡೆ ಆಗಲಿದೆ. ಭೂಗತ ಲೋಕದ ಕತೆಗಳನ್ನು ತೆರೆ ಮೇಲೆ ತರುವುದರಲ್ಲಿ ರಾಮ್ ಗೋಪಾಲ್ ವರ್ಮಾ ನಂಬರ್ 1. ಈ ಹಿಂದೆ ಹಲವು ಕಲ್ಟ್ ಕ್ಲಾಸಿಕ್ ಅಂಡರ್ವರ್ಲ್ಡ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈ ಸಿನಿಮಾ ಸಹ ಅದೇ ಸಾಲಿಗೆ ಸೇರಲಿ ಎಂಬುದು ಉಪ್ಪಿ ಅಭಿಮಾನಿಗಳ ಆಶಯ.
ಉಪೇಂದ್ರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಮೂರು ವರ್ಷದ ಅವಧಿಯಲ್ಲಿ ಹಲವು ಸಿನಿಮಾಗಳಲ್ಲಿ ಉಪೇಂದ್ರ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಉಪೇಂದ್ರ ನಟಿಸಿರುವ 'ತ್ರಿಶೂಲಂ', 'ಬುದ್ಧಿವಂತ 2' ಹಾಗೂ 'ಲಗಾಮ್' ಸಿನಿಮಾಗಳು ಬಿಡುಗಡೆ ಆಗಬೇಕಿವೆ. ಆರ್.ಚಂದ್ರು ನಿರ್ದೇಶನದ ದೊಡ್ಡ ಬಜೆಟ್ ಸಿನಿಮಾ 'ಕಬ್ಜ'ನಲ್ಲಿಯೂ ಉಪೇಂದ್ರ ನಟಿಸುತ್ತಿದ್ದಾರೆ. ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದ್ದು, ಸಿನಿಮಾದ ಮುಖ್ಯ ಪಾತ್ರದಲ್ಲಿ ಸುದೀಪ್ ಸಹ ನಟಿಸಿದ್ದಾರೆ. ಇದೀಗ ತಮ್ಮದೇ ನಿರ್ದೇಶನದ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಇವುಗಳ ಜೊತೆಗೆ ಉಪ್ಪಿ ನಟನೆಯ 'ಹೋಮ್ ಮಿನಿಸ್ಟರ್' ಸಿನಿಮಾ ಏಪ್ರಿಲ್ 01 ರಂದು ತೆರೆಗೆ ಬರಲಿದೆ. ಉಪ್ಪಿ ಅಭಿನಯದ ತೆಲುಗು ಸಿನಿಮಾ 'ಗನಿ' ಏಪ್ರಿಲ್ 08 ರಂದು ತೆರೆಗೆ ಬರುತ್ತಿದೆ. ಇವುಗಳ ನಡುವೆ ಇದೀಗ ರಾಮ್ ಗೋಪಾಲ್ ವರ್ಮಾ ಜೊತೆ ಸಿನಿಮಾ ಮಾಡುತ್ತಿದ್ದಾರೆ.