Don't Miss!
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಾಹುಬಲಿ' ಚಿತ್ರವನ್ನ ಕೈಬಿಟ್ಟ ಶ್ರೀದೇವಿಯ ಅಸಲಿ ಕಾರಣ ಬಿಚ್ಚಿಟ್ಟ ವರ್ಮಾ
ರಾಜಮೌಳಿ ನಿರ್ದೇಶನದಲ್ಲಿ ತಯಾರಾಗಿದ್ದ ಮೆಗಾಸಿನಿಮಾ ಬಾಹುಬಲಿ ಎರಡು ಕಂತು ಮುಗಿದರೂ, ಆ ಚಿತ್ರದ ಕುರಿತು ಕೆಲವು ವಿಚಾರಗಳು ಮಾತ್ರ ಇನ್ನು ನಿಗೂಢವಾಗಿಯೇ ಉಳಿದಿದೆ. ಅವುಗಳಲ್ಲಿ ನಟಿ ಶ್ರೀದೇವಿಯ ಕೂಡ ಒಬ್ಬರು.
ಹೌದು, ಎಲ್ಲ ಅಂದುಕೊಂಡಂತೆ ಆಗಿದ್ದರೇ ಶ್ರೀದೇವಿ 'ಬಾಹುಬಲಿ' ಚಿತ್ರದಲ್ಲಿ ಅಭಿನಯಿಸಬೇಕಿತ್ತು. ಆದ್ರೆ, ಕಾರಣಾಂತರಗಳಿಂದ ಈ ದೊಡ್ಡ ಸಿನಿಮಾವನ್ನ ಕೈಬಿಟ್ಟರು. ಇಂತಹ ಚಿತ್ರವನ್ನ ಶ್ರೀದೇವಿ ಬಿಟ್ಟಿದ್ದು ಯಾಕೆ ಎಂಬ ಪ್ರಶ್ನೆ ಚಿತ್ರಪ್ರೇಮಿಗಳನ್ನ ಕಾಡುತ್ತಿತ್ತು. ಈಗಲೂ ಕಾಡುತ್ತಿದೆ.
ಬೋನಿಯನ್ನ ನಷ್ಟದ ಕೂಪಕ್ಕೆ ತಳ್ಳಿದ್ದು ಶ್ರೀದೇವಿ ಅಭಿನಯದ 'ಈ' ಚಿತ್ರ.!
ಈ ಬಗ್ಗೆ ರಾಜಮೌಳಿ ಕಾರಣ ಬಹಿರಂಗಪಡಿಸಿಲ್ಲ, ಅತ್ತ ಕಾರಣ ಹೇಳಲು ಶ್ರೀದೇವಿಯೇ ಇಲ್ಲ. ಇಂತಹ ಸಂದರ್ಭದಲ್ಲಿ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈ ವಿಷ್ಯದ ಬಗ್ಗೆ ಮಾತನಾಡಿದ್ದಾರೆ. 'ಬಾಹುಬಲಿ' ಚಿತ್ರದಿಂದ ಹಿಂದೆ ಸರಿಯಲು ಕಾರಣ ಬೋನಿ ಕಪೂರ್ ಎಂದು ಅಚ್ಚರಿ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ವರ್ಮಾ ಬಾಹುಬಲಿ ಚಿತ್ರವನ್ನ ಮಾಡದಿರುವ ಬಗ್ಗೆ ಶ್ರೀದೇವಿ ಬಳಿ ಚರ್ಚೆ ನಡೆಸಿದ್ದರಂತೆ. ಆರ್.ಜಿ.ವಿ ಹೇಳುವ ಪ್ರಕಾರ ಶ್ರೀದೇವಿಗೆ ಈ ಚಿತ್ರದಲ್ಲಿ ನಟಿಸುವ ಆಸೆಯಿತ್ತಂತೆ. ಇಂತಹ ದೊಡ್ಡ ಚಿತ್ರದಲ್ಲಿ ಅಭಿನಯಿಸಲು ಕಾತುರದಿಂದ ಇದ್ದರಂತೆ. ಆದ್ರೆ, ಬೋನಿ ಕಪೂರ್ ಸಂಭಾವನೆ ವಿಚಾರದಲ್ಲಿ ಇಟ್ಟಿದ್ದ ಬೇಡಿಕೆಯಿಂದ ಈ ಪ್ರಾಜೆಕ್ಟ್ ಕಳೆದುಕೊಳ್ಳಬೇಕಾಯಿತು'' ಎಂದು ವರ್ಮಾ ತಿಳಿಸಿದ್ದಾರೆ.
ಶ್ರೀದೇವಿ ಹಠಾತ್ ನಿಧನದ ಬಗ್ಗೆ ಸಹೋದರಿ ಶ್ರೀಲತಾ ಮೌನವಾಗಿರೋದು ಯಾಕೆ.?
ಆ ನಂತರವೇ ಶ್ರೀದೇವಿ ಜಾಗಕ್ಕೆ ಬಹುಭಾಷೆ ನಟಿ ರಮ್ಯಾಕೃಷ್ಣ ಎಂಟ್ರಿ ಕೊಟ್ಟರು. ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರದಲ್ಲಿ ಕಾಣಿಸಿಕೊಂಡ್ರು, ಬಾಹುಬಲಿ ಮತ್ತು ಬಲ್ಲಾಳದೇವ ಪಾತ್ರಗಳ ನಂತರ ಶಿವಗಾಮಿ ಪಾತ್ರವೇ ಹೆಚ್ಚು ಖ್ಯಾತಿ ಗಳಿಸಿಕೊಂಡಿತ್ತು.
ಶ್ರೀದೇವಿ ಒಪ್ಪಿದ್ದರೂ ಬೋನಿ ಕಪೂರ್ ಒಪ್ಪದೇ ಹೋಗಿದ್ದು ಬಾಹುಬಲಿ ಚಿತ್ರವನ್ನ ಕೈಬಿಡುವಂತೆ ಮಾಡಿತು. ಬೋನಿ ಕಪೂರ್ ಅವರಿಂದ ಕೇವಲ 'ಬಾಹುಬಲಿ' ಚಿತ್ರ ಮಾತ್ರವಲ್ಲ, ಅನೇಕ ಚಿತ್ರಗಳನ್ನ ಶ್ರೀದೇವಿ ಬಿಟ್ಟಿದ್ದಾರೆ.