Don't Miss!
- News 2024ರ ಲೋಸಕಭೆ ಚುನಾವಣೆಗೆ ಮತ ಹಾಕುವುದು ಹೇಗೆ?
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿದಂಬರಂ ಅರೆಸ್ಟ್: ಮೋದಿ ಸರ್ಕಾರವನ್ನು ಹೊಗಳಿದ ವರ್ಮ
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ರನ್ನು ಬಂಧನ ಮಾಡಲಾಗಿದೆ. ಐ ಎನ್ ಎಕ್ಸ್ ಮೀಡಿಯಾ ಹಗರಣದ ಆರೋಪದಲ್ಲಿ ಸಿಬಿಐ ಅಧಿಕಾರಗಳು ಚಿದಂಬರಂ ರನ್ನು ಅರೆಸ್ಟ್ ಮಾಡಿದ್ದಾರೆ.
ಈ ಘಟನೆಯ ಬಗ್ಗೆ ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮೋದಿ ಸರ್ಕಾರವನ್ನು ಹೊಗಳಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಕೋರ್ಟ್ಗೆ ಚಿದಂಬರಂ ಹಾಜರು
''ಇದು ಪ್ರಜಾಪ್ರಭುತ್ವದ ನಿಜವಾದ ಪ್ರದರ್ಶನ. ಗೃಹ ಸಚಿವ ಆಗಿರುವ ಸಮಯದಲ್ಲಿ ತಾವೇ ಸಿಬಿಐ ಹೆಡ್ ಕ್ವಾಟ್ರಸ್ ಅನ್ನು ಉದ್ಘಾಟನೆ ಮಾಡಿದ್ದರು. ಈಗ ಅವರೇ ಸಿಬಿಐ ಕಸ್ಟಡಿಯಲ್ಲಿ ಇದ್ದಾರೆ. ಇದು ಎಂತಹ ವಿಚಿತ್ರ. ಮೋದಿ ಇಂಡಿಯಾ ಪದೇ ಪದೇ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಸಾಬೀತು ಮಾಡಿತ್ತಿದ್ದರೆ.'' ಎಂದು ರಾಮ್ ಗೋಪಾಲ್ ವರ್ಮ ಬರೆದುಕೊಂಡಿದ್ದಾರೆ.
ತಮ್ಮ ಟ್ವೀಟ್ ಮೂಲಕ ಪಿ ಚಿದಂಬರಂ ರನ್ನು ವ್ಯಂಗ್ಯ ಮಾಡಿರುವ ರಾಮ್ ಗೋಪಾಲ್ ವರ್ಮ, ಮೋದಿ ಸರ್ಕಾರವನ್ನು ಮೆಚ್ಚಿಕೊಂಡಿದ್ದಾರೆ.
ಅಂದಹಾಗೆ, ಇಂದು (ಗುರುವಾರ) ಮಧ್ಯಾಹ್ನ 2 ಗಂಟೆ ಸುಮಾರಿಗೆ ಚಿದಂಬರಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಅನುವು ಮಾಡಿಕೊಡಿವಂತೆ ಅವರನ್ನು ತಮ್ಮ ವಶಕ್ಕೆ ನೀಡಲು ಸಿಬಿಐ ಅಧಿಕಾರಿಗಳು ಕೋರಲಿದ್ದಾರೆ.