Don't Miss!
- News ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿದಂಬರಂ ಅರೆಸ್ಟ್: ಮೋದಿ ಸರ್ಕಾರವನ್ನು ಹೊಗಳಿದ ವರ್ಮ
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ರನ್ನು ಬಂಧನ ಮಾಡಲಾಗಿದೆ. ಐ ಎನ್ ಎಕ್ಸ್ ಮೀಡಿಯಾ ಹಗರಣದ ಆರೋಪದಲ್ಲಿ ಸಿಬಿಐ ಅಧಿಕಾರಗಳು ಚಿದಂಬರಂ ರನ್ನು ಅರೆಸ್ಟ್ ಮಾಡಿದ್ದಾರೆ.
ಈ ಘಟನೆಯ ಬಗ್ಗೆ ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮೋದಿ ಸರ್ಕಾರವನ್ನು ಹೊಗಳಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಕೋರ್ಟ್ಗೆ ಚಿದಂಬರಂ ಹಾಜರು
''ಇದು ಪ್ರಜಾಪ್ರಭುತ್ವದ ನಿಜವಾದ ಪ್ರದರ್ಶನ. ಗೃಹ ಸಚಿವ ಆಗಿರುವ ಸಮಯದಲ್ಲಿ ತಾವೇ ಸಿಬಿಐ ಹೆಡ್ ಕ್ವಾಟ್ರಸ್ ಅನ್ನು ಉದ್ಘಾಟನೆ ಮಾಡಿದ್ದರು. ಈಗ ಅವರೇ ಸಿಬಿಐ ಕಸ್ಟಡಿಯಲ್ಲಿ ಇದ್ದಾರೆ. ಇದು ಎಂತಹ ವಿಚಿತ್ರ. ಮೋದಿ ಇಂಡಿಯಾ ಪದೇ ಪದೇ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಸಾಬೀತು ಮಾಡಿತ್ತಿದ್ದರೆ.'' ಎಂದು ರಾಮ್ ಗೋಪಾಲ್ ವರ್ಮ ಬರೆದುಕೊಂಡಿದ್ದಾರೆ.
ತಮ್ಮ ಟ್ವೀಟ್ ಮೂಲಕ ಪಿ ಚಿದಂಬರಂ ರನ್ನು ವ್ಯಂಗ್ಯ ಮಾಡಿರುವ ರಾಮ್ ಗೋಪಾಲ್ ವರ್ಮ, ಮೋದಿ ಸರ್ಕಾರವನ್ನು ಮೆಚ್ಚಿಕೊಂಡಿದ್ದಾರೆ.
ಅಂದಹಾಗೆ, ಇಂದು (ಗುರುವಾರ) ಮಧ್ಯಾಹ್ನ 2 ಗಂಟೆ ಸುಮಾರಿಗೆ ಚಿದಂಬರಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಅನುವು ಮಾಡಿಕೊಡಿವಂತೆ ಅವರನ್ನು ತಮ್ಮ ವಶಕ್ಕೆ ನೀಡಲು ಸಿಬಿಐ ಅಧಿಕಾರಿಗಳು ಕೋರಲಿದ್ದಾರೆ.