Don't Miss!
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳದಿಂಗಳಾಗಿ ಮತ್ತೆ ಬಂದ ರಮಣಿತು ಚೌಧರಿ
ತಮಗೆ ಹಿಂದಿ ಚಿತ್ರಗಳಲ್ಲಿ ಸಾಕಷ್ಟು ಅವಕಾಶಗಳು ಬಂದ ಕಾರಣ ಕನ್ನಡ ಚಿತ್ರಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ. ಬಂದ ಆಫರ್ ಗಳಿಗೆ ಸಂಭಾವನೆ ಕೂಡ ನಿರೀಕ್ಷಿಸಿದಷ್ಟು ಇರುತ್ತಿರಲಿಲ್ಲ. ಯಾರೇ ಆಗಲಿ ಒಂದು ಹಂತಕ್ಕೆ ಏರಿದ ಮೇಲೆ ಅವರ ಸಂಭಾವನೆಯೂ ಮುಖ್ಯ ಅಲ್ಲವೆ ಎನ್ನುತ್ತಾರೆ ರಮಣೀತು.
ಬಾಲಿವುಡ್ ಚಿತ್ರಗಳ ಜೊತೆಗೆ ತೆಲುಗು ಹಾಗೂ ತಮಿಳು ಚಿತ್ರಗಳಲ್ಲೂ ರಮಣಿತು ಚೌದರಿ ಬಿಜಿಯಾಗಿದ್ದಾರಂತೆ. ಈಗ ಹೊಸಬರೇ ತುಂಬಿರುವ ಕನ್ನಡದ 'ಅಗಮ್ಯ' ಚಿತ್ರದಲ್ಲಿ ಅತಿಥಿ ಪಾತ್ರ ಪೋಷಿಸಲು ಬಂದಿದ್ದಾರೆ.
ಅತಿಥಿ ಪಾತ್ರವಾದರೂ ಅಭಿನಯಕ್ಕೆ ಸವಾಲೊಡ್ಡುವ ಪಾತ್ರ ಎನ್ನುತ್ತಾರೆ. ಈ ಹಿಂದೆ ಕನ್ನಡದ ಬೆಳದಿಂಗಳಾಗಿ ಬಾ, ಪಯಣ, ಪ್ರೀತಿಯಿಂದ ರಮೇಶ್, ಮಿ.ಪೇಂಟರ್, ಧನುಷ್, ಪಲ್ಲಕ್ಕಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಎಲ್ಲೂ ಅವರಿಗೆ ಬ್ರೇಕ್ ಸಿಕ್ಕಿರಲಿಲ್ಲ. ಈಗ ಹೊಸ ಅಗಮ್ಯ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.
ಮದುವೆ ಬಗ್ಗೆಯೂ ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರಂತೆ. ಆದರೆ ರಮಣಿತು ಮಾತ್ರ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲವಂತೆ. ಸದ್ಯಕ್ಕೆ ತಾವು ಓಶೋ ಅವರ ತತ್ವಗಳನ್ನು ಅನುಸರಿಸುತ್ತಿದ್ದೇವೆ. 'ಜೀವನದ ಪ್ರತಿ ಕ್ಷಣವನ್ನು ಸಂತೋಷವಾಗಿ ಕಳೆ' ಎಂಬುದು ಸದ್ಯದ ಅವರ ಮಂತ್ರವಂತೆ. ಇದರ ಜೊತೆಗೆ ಗಾಯನ, ಛಾಯಾಗ್ರಹಣ, ಜಾಹೀರಾತು ಕೆಲಸಗಳು ಖುಷಿ ಕೊಡುತ್ತಿವೆಯಂತೆ. (ಏಜೆನ್ಸೀಸ್)