Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಕೃಪೆ: ಮತ್ತೆ ರಾಮಾಯಣ, ಮಹಾಭಾರತ
ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ, ಮಹಾಭಾರತ ಧಾರವಾಹಿಗಳು ಹೆಚ್ಚು ಜನಕ್ಕೆ ನೆನಪೇ ಇದ್ದಂತಿಲ್ಲ.
ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಈ ಎರಡು ಧಾರವಾಹಿಗಳು ಕೋಟ್ಯಂತರ ಜನರ ಮನಸೋರೆಗೊಳಿಸಿದ್ದವು. ಟಿಆರ್ಪಿ ಲೆಕ್ಕಾಚಾರ ಆ ಕಾಲದಲ್ಲಿ ಇದ್ದಿದ್ದರೆ ಇವುಗಳು ಟಾಪ್ ಧಾರವಾಹಿಗಳು ಆಗಿರುತ್ತಿದ್ದವು.
ಕೊರೊನಾ ಕೃಪೆಯಿಂದ ಈಗ ಮತ್ತೆ ಗತವೈಭವ ಮತ್ತೆ ತಿರುಗಿ ಬರುತ್ತಿದೆ. ರಾಮಾಯಣ, ಮಹಾಭಾರತ ಧಾರವಾಹಿಗಳು ಮತ್ತೆ ಪ್ರಸಾರವಾಗಲಿವೆ.
ಹೌದು, ದೂರದರ್ಶನದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರವಾಹಿಗಳು ಮತ್ತೊಮ್ಮೆ ಪ್ರಸಾರವಾಗಲಿವೆ. 1990, 2000 ದಶಕದಲ್ಲಿ ಈ ಧಾರವಾಹಿಗಳನ್ನು ನೋಡಿದವರು, ತಮ್ಮ ಮಕ್ಕಳಿಗೆ ಈಗ ಮತ್ತೊಮ್ಮೆ ಈ ಧಾರವಾಹಿಗಳನ್ನು ಈಗ ತೋರಿಸಬಹುದಾಗಿದೆ.
ಪ್ರಸಾರ ಭಾರತಿಯ ಕಾರ್ಯನಿರವಾಹಕ ಶಶಿ ಶೇಖರ್ ಇಂದು ಟ್ವೀಟ್ ಮಾಡಿದ್ದು, ರಾಮಾಯಣ ಮತ್ತು ಮಹಾಭಾರತವನ್ನು ಮತ್ತೆ ಪ್ರಸಾರ ಮಾಡುವುದಾಗಿ ಹೇಳಿದ್ದಾರೆ. ಯಾವ ಸಮಯಕ್ಕೆ ಪ್ರಸಾರ ಮಾಡಬೇಕು ಎಂಬುದನ್ನು ನಿರ್ಧರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಮಾಯಣ ಮತ್ತು ಮಹಾಭಾರತ ಧಾರವಾಹಿಗಳು 2000 ಆರಂಭದಲ್ಲಿ ಬಹು ಖ್ಯಾತ ಧಾರವಾಹಿಗಳಾಗಿದ್ದವು. ಕುಟುಂಬವೆಲ್ಲಾ ಒಟ್ಟಿಗೆ ಕುಳಿತು ಈ ಧಾರವಾಹಿಗಳನ್ನು ನೋಡುತ್ತಿದ್ದರು.