Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ಬಳಿಕ ರಶ್ಮಿಕಾ ಚಿತ್ರವನ್ನು ಹೊಗಳಿದ ರಾಮ್ ಚರಣ್
ಕನ್ನಡದ ನಟಿ ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ದಿನೇ ದಿನೇ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಟಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ನಟರು ಕೂಡ ರಶ್ಮಿಕಾ ನಟನೆಯನ್ನು ಹೊಗಳುತ್ತಿದ್ದಾರೆ.
ಇತ್ತೀಚಿಗಷ್ಟೆ ಬಿಡುಗಡೆಯಾಗಿರುವ 'ಗೀತಾ ಗೋವಿಂದಂ' ಸಿನಿಮಾಗೆ ದೊಡ್ಡ ಪ್ರತಿಕ್ರಿಯೆ ಸಿಕ್ಕಿದೆ. ತೆಲುಗು ಚಿತ್ರರಂಗದ ಬಿಗ್ ಸ್ಟಾರ್ ಗಳು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಸದ್ಯ, ರಾಮ್ ಚರಣ್ ಈ ಚಿತ್ರದ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.
ರಶ್ಮಿಕಾ ಅಭಿನಯವನ್ನು ಹಾಡಿ ಹೊಗಳಿದ 'ಪ್ರಿನ್ಸ್' ಮಹೇಶ್ ಬಾಬು
''ಅರ್ಜುನ್ ರೆಡ್ಡಿ' ಸಿನಿಮಾದ ನಂತರ ಸೂಕ್ತ ಪಾತ್ರವನ್ನು ವಿಜಯ್ ದೇವರಕೊಂಡ ಆಯ್ಕೆ ಮಾಡಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರನ್ನು ನೋಡುವುದು ತುಂಬ ಖುಷಿ ಆಗುತ್ತದೆ. ಇಬ್ಬರೂ ಸಹಜವಾಗಿ ನಟಿಸಿದ್ದಾರೆ. ಅವರ ಅಭಿನಯ ಚಿತ್ರದ ಸುಂದರ ಕಥೆಯನ್ನು ಪೂರ್ಣಗೊಳಿಸಿದೆ. ಸಿನಿಮಾದ ಸಂಗೀತ ಚೆನ್ನಾಗಿದೆ. ಒಳ್ಳೆಯ ಕಥೆಯನ್ನು ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ.'' ಎಂದು ರಾಮ್ ಚರಣ್ ಬರೆದುಕೊಂಡಿದ್ದಾರೆ.
ರಾಮ್ ಚರಣ್ ಅವರ ಬರಹಕ್ಕೆ ಪ್ರತಿಕ್ರಿಯೆ ನೀಡಿರುವ ರಶ್ಮಿಕಾ ''ಸರ್, ನೀವು ಸಿನಿಮಾ ನೋಡಿ ಇಷ್ಟ ಪಟ್ಟಿದ್ದೀರಿ ಎಂಬುದು ತುಂಬ ಖುಷಿ ನೀಡಿದೆ. ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದ'' ಎಂದಿದ್ದಾರೆ.
ಅಂದಹಾಗೆ, ಕೆಲ ದಿನಗಳ ಹಿಂದೆ ನಟ ಮಹೇಶ್ ಬಾಬು 'ಗೀತಾ ಗೋವಿಂದಂ' ಸಿನಿಮಾವನ್ನು ಹೊಗಳಿದ್ದರು. ಈಗ ರಾಮ್ ಚರಣ್ ಕೂಡ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ.