Don't Miss!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮೇಶ್ ಅರವಿಂದ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಇನ್ನುಮುಂದೆ ಡಾ ರಮೇಶ್ ಅರವಿಂದ್ ಆಗಲಿದ್ದಾರೆ. ಸಿನಿಮಾ ರಂಗಕ್ಕೆ ಸುಮಾರು ಮೂವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ರಮೇಶ್ ಅರವಿಂದ್ ಅವರ ಕಲಾ ಸೇವೆಯನ್ನು ಗುರುತಿಸಿದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಈ ಗೌರವವನ್ನು ನೀಡಿದೆ. ಇನ್ನು ವಿಶ್ವ ವಿದ್ಯಾಲಯದ ಕುಲಪತಿ ಡಾ. ರಾಮಚಂದ್ರ ಗೌಡ ಅವರು ಈ ಹಿಂದೆಯೇ ತಿಳಿಸಿದ್ದಂತೆ 16 ಅರ್ಜಿದಾರರಲ್ಲಿ ಒಟ್ಟು ಮೂವರಿಗೆ ಡಾಕ್ಟರೇಟ್ ನೀಡಲಾಗಿದೆ.
ಸಿನಿಮಾ ಕ್ಷೇತ್ರದ ರಮೇಶ್ ಅರವಿಂದ್ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್, ಧಾರ್ಮಿಕ ವಲಯದಲ್ಲಿ ಬೀದರದ ಬಸವತತ್ವ ಪ್ರಚಾರಕಿ ಮಾತಾ ಅಕ್ಕ ಅನ್ನಪೂರ್ಣಾ ತಾಯಿ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ತಜ್ಞ ಡಾಕ್ಟರ್ ಆಫ್ ಸೈನ್ಸ್ ಪ್ರಶಸ್ತಿಯನ್ನು ನೀಡಲಾಗಿದೆ.
ಇನ್ನು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಸೇರಿದಂತೆ 140ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮೇಶ್ ಅರವಿಂದ್ ಡಾಕ್ಟರೇಟ್ ಸ್ವೀಕರಿಸಿದ ನಂತರ ಭಾವುಕರಾಗಿದ್ದಾರೆ. ಡಾಕ್ಟರೇಟ್ ಸ್ವೀಕರಿಸಿದ ನಂತರ ಮಾತನಾಡಿದ ಅವರು ತಮಗೆ ಡಾಕ್ಟರೇಟ್ ಲಭಿಸಿರುವ ವಿಷಯ ಬಂದ ಕೂಡಲೇ ಕುಟುಂಬದ ವಾಟ್ಸಾಪ್ ಗ್ರೂಪ್ನಲ್ಲಿ ತಿಳಿಸಿದೆ ಹಾಗೂ ಕುಟುಂಬದ ಸದಸ್ಯರೆಲ್ಲರೂ ಖುಷಿಯಿಂದ ಅಭಿನಂದನೆ ತಿಳಿಸಿದರು ಮತ್ತು ನಿಮ್ಮ ತಂದೆ ಇದ್ದಿದ್ದರೆ ಈಗ ತುಂಬಾ ಸಂತಸ ಮತ್ತು ಹೆಮ್ಮೆ ಪಡುತ್ತಿದ್ದರು ಎಂದು ತಿಳಿಸುತ್ತಿದ್ದರು ಎಂದು ಹೇಳಿದರು ಎಂದು ನಡೆದ ಘಟನೆ ಹಂಚಿಕೊಂಡು ಭಾವುಕರಾದರು.
ಇನ್ನೂ ಮುಂದುವರೆದು ಮಾತನಾಡಿದ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಧನ್ಯವಾದ ಅರ್ಪಿಸಿದರು ಹಾಗೂ ತಾನು ಇಷ್ಟೆಲ್ಲಾ ಸಾಧಿಸಲು ಕಾರಣವಾದ ಸಿನಿಮಾಗೆ ವಿಶೇಷ ಕೃತಜ್ಞತೆಯನ್ನು ಸಲ್ಲಿಸಿದರು. ನಾನು ಇಂದು ಏನೇ ಸಾಧನೆ ಹಾಗೂ ಸಂಪಾದನೆ ಮಾಡಿದ್ದರೂ ಅದಕ್ಕೆ ಸಿನಿಮಾ ಕಾರಣ ಎಂದರು.