Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಶ್ ನಿಧನಕ್ಕೆ ನಟಿ ರಮ್ಯಾ ಟ್ವೀಟ್
ನಟ ಅಂಬರೀಶ್ ನಿಧನಕ್ಕೆ ಇಡೀ ಕರ್ನಾಟಕಕ್ಕೆ ಕತ್ತಲು ಆವರಿಸಿದೆ. ಕನ್ನಡ ಚಿತ್ರರಂಗ ಮತ್ತೊಂದು ಹೆಮ್ಮೆಯ ನಟನನ್ನು ಕಳೆದುಕೊಂಡಿದೆ. ಚಿತ್ರರಂಗವೆಂಬ ಕುಟುಂಬದ ಒಬ್ಬ ಹಿರಿಯಣ್ಣ ಅಗಲಿದ್ದು, ಇಡೀ ಚಿತ್ರರಂಗ ಅವರಿಗೆ ಸಂತಾಪ ಸೂಚಿಸಿದೆ.
ನಟಿ ರಮ್ಯಾ ಸಹ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಅಂಬರೀಶ್ ಅವರ ನೆನಪು ಮಾಡಿಕೊಂಡಿದ್ದಾರೆ. ''ಅಂಬರೀಶ್ ಅಂಕಲ್ ಅವರ ಸುದ್ದಿ ಕೇಳಿ ನಾನು ತೀವ್ರ ದುಃಖಿತಳಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಸಾವಿಗೆ ನನ್ನ ಸಂತಾಪಗಳು. ಅವರ ಪ್ರೀತಿಯನ್ನು ನಾವು ಎಂದಿಗೂ ನೆನೆಪಿನಲ್ಲಿಡುತ್ತೇವೆ.'' ಎಂದು ಟ್ವೀಟ್ ಮಾಡಿದ್ದಾರೆ.
ಅಂಬಿ ಅಂತ್ಯಕ್ರಿಯೆಗೆ ವಿದೇಶದಿಂದ ಬರ್ತಾರಾ 'ಯಜಮಾನ'.?
ಅಂಬರೀಶ್ ಹಾಗೂ ರಮ್ಯಾ ಬಹಳ ವರ್ಷಗಳಿಂದ ಒಡನಾಟ ಹೊಂದಿದವರು. ಸಿನಿಮಾ ಮಾತ್ರವಲ್ಲದೆ ರಾಜಕೀಯ ಜೀವನದಲ್ಲಿ ಕೂಡ ಅಂಬರೀಶ್ ಜೊತೆ ರಮ್ಯಾ ಇದ್ದರು. ರಾಜಕೀಯ ವಿಚಾರವಾಗಿ ಇಬ್ಬರ ನಡುವೆ ಮನಸ್ತಾಪ ಮೂಡಿತ್ತು.
ಅಂದಹಾಗೆ, 'ಕಠಾರಿವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಅಂಬರೀಶ್ ಹಾಗೂ ರಮ್ಯಾ ಒಟ್ಟಿಗೆ ನಟಿಸಿದ್ದರು.
Extremely saddened to hear of the passing of Ambareesh uncle. May his soul rest in peace. My condolences to his family. Will always remember him fondly.
— Divya Spandana/Ramya (@divyaspandana) November 24, 2018
ಹಿರಿಯಣ್ಣ ಅಂಬಿ ಇನ್ನಿಲ್ಲ: ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಸೋಮವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸ್ಮಾರಕ ಪಕ್ಕದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಶ್ ಅಂತಿಮ ಸಂಸ್ಕಾರ ನಡೆಯಲಿದೆ.