Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಇಂದಿನ ರಾಜಕೀಯ ಪ್ರಾಮಾಣಿಕರನ್ನು ಪ್ರೋತ್ಸಾಹಿಸುತ್ತಿಲ್ಲ' ಎಂದ ರಮ್ಯಾ
ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದು ಗುರುತಿಸಿಕೊಂಡಿದ್ದ ಐಎಎಸ್ ಆಫೀಸರ್ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನಿಂದ ವರ್ಗಾವಣೆ ಮಾಡಿರುವುದಕ್ಕೆ ನಟಿ-ರಾಜಕಾರಣಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ''ಪ್ರಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುವುದಿಲ್ಲ'' ಎಂದಿದ್ದಾರೆ.
Recommended Video
ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ವರ್ಗಾವಣೆಯಲ್ಲಿ ಅಂತ್ಯ ಕಂಡಿದೆ. ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿದ್ರೆ, ಶಿಲ್ಪಾ ನಾಗ್ರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿ ಅಧಿಕಾರ ನೀಡಲಾಗಿದೆ. ಮುಂದೆ ಓದಿ...
'ಭಾರತ ಸಿಂಧೂರಿ' ಹೆಸರಿನಲ್ಲಿ ಬರ್ತಿದೆ ರೋಹಿಣಿ ಸಿಂಧೂರಿ ಬಯೋಪಿಕ್
ರೋಹಿಣಿ ಸಿಂಧೂರಿ ಕೆಲಸದ ಬಗ್ಗೆ ರಮ್ಯಾ ಮೆಚ್ಚುಗೆ
ಮೈಸೂರು ಮಾಜಿ ಡಿಸಿ ರೋಹಿಣಿ ಸಿಂಧೂರಿ ಕೆಲಸದ ಬಗ್ಗೆ ಮಂಡ್ಯ ಮಾಜಿ ಸಂಸದೆ ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ''ಸಿಂಧೂರಿ ಕಾರ್ಯ ವೈಖರಿಯನ್ನು ನಾನು ಅಂದು ಮೆಚ್ಚಿದ್ದೇನೆ, ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು, ಪ್ರಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಹಾಗೂ ಬೆಂಬಲಿಸುತ್ತಿಲ್ಲ'' ಎಂದು ನಿರಾಸೆ ವ್ಯಕ್ತಪಡಿಸಿದರು.
'ಸಿನಿಮಾ ಮುಗಿದು ಹೋದ ಅಧ್ಯಾಯ': ಅಭಿಮಾನಿಗಳ ಆಸೆಗೆ ಮತ್ತೆ ತಣ್ಣೀರೆರಚಿದ ರಮ್ಯಾ
ಸಿಂಧೂರಿ ಬಯೋಪಿಕ್ ಚರ್ಚೆ?
ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಅವರ ಕುರಿತು ಸಿನಿಮಾ ಮಾಡುವ ಬಗ್ಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಚರ್ಚೆಗಳು ನಡೆಯುತ್ತಿದೆ. ನಾಲ್ವಡಿ ಕೃಷ್ಣರಾಜ್ ಒಡೆಯರ್ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಿಸಲು ಚಿಂತನೆ ನಡೆಸಿದ್ದು, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ನಟಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸಿನಿಮಾ ಮುಗಿದ ಅಧ್ಯಾಯ
ರಾಜಕೀಯಕ್ಕೆ ಎಂಟ್ರಿ ಆದ್ಮೇಲೆ ನಟಿ ರಮ್ಯಾ ಯಾವುದೇ ಸಿನಿಮಾ ಮಾಡಿಲ್ಲ. ಇತ್ತೀಚಿನ ದಿನಗಳಲ್ಲಿ ರಾಜಕೀಯದಿಂದಲೂ ಮೋಹಕತಾರೆ ಅಂತರ ಕಾಯ್ದುಕೊಂಡಿದ್ದಾರೆ. ಹಾಗಾಗಿ, ರಮ್ಯಾ ಮತ್ತೆ ಚಿತ್ರರಂಗಕ್ಕೆ ಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ. ಆದರೆ, ಸಿನಿಮಾ ಮುಗಿದ ಅಧ್ಯಾಯ ಎಂದು ರಮ್ಯಾ ಅದಾಗಲೇ ಹೇಳಿಬಿಟ್ಟಿದ್ದಾರೆ.
ಸಿಂಧೂರಿ ಸಿನಿಮಾದಲ್ಲಿ ರಮ್ಯಾ?
ರೋಹಿಣಿ ಸಿಂಧೂರಿ ಕುರಿತು ಸಿನಿಮಾ ಮಾಡಲಾಗುವುದು ಎಂಬ ಚರ್ಚೆಯ ನಡುವೆ, ರಮ್ಯಾ ಅವರೇ ಆ ಪಾತ್ರ ಮಾಡಿದ್ರೆ ಹೆಂಗೆ ಎಂಬ ಆಸೆಯೂ ಇದೆ. ರಮ್ಯಾ ಮತ್ತೆ ಚಿತ್ರರಂಗಕ್ಕೆ ಬರಬೇಕೆ? ಯಾವ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ರೆ ನಿಮಗೆ ಇಷ್ಟ ಆಗುತ್ತದೆ ಎಂದು ಕಾಮೆಂಟ್ ಮೂಲಕ ತಿಳಿಸಿ.