Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಗೆ ರಮ್ಯಾ ಜೋಡಿ.? 'ರಾಜವೀರ ಮದಕರಿ ನಾಯಕ' ನಿರ್ದೇಶಕ ಕೊಟ್ಟ ಸ್ಪಷ್ಟನೆ ಇದು.!
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐತಿಹಾಸಿಕ ಸಿನಿಮಾ 'ರಾಜವೀರ ಮದಕರಿ ನಾಯಕ' ಮುಹೂರ್ತ ಸಮಾರಂಭ ನೆರವೇರುತ್ತಿದ್ದಂತೆಯೇ, ಗಾಂಧಿನಗರದಲ್ಲಿ ಒಂದು ಸುದ್ದಿ ಹರಿದಾಡಲು ಆರಂಭಿಸಿತು.
ಅದೇನಪ್ಪಾ ಅಂದ್ರೆ, 'ರಾಜವೀರ ಮದಕರಿ ನಾಯಕ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗಕ್ಕೆ ವಾಪಸ್ ಆಗುತ್ತಾರಂತೆ. ದರ್ಶನ್ ಗೆ ಜೋಡಿಯಾಗಿ ರಮ್ಯಾ ಅಭಿನಯಿಸಲಿದ್ದಾರಂತೆ. ಚಿತ್ರದಲ್ಲಿ ರಾಣಿ ಆಗಿ ರಮ್ಯಾ ಮಿಂಚಲಿದ್ದಾರಂತೆ ಎಂಬ ಅಂತೆ-ಕಂತೆ ಗಾಂಧಿನಗರದಲ್ಲಿ ಗಿರಕಿ ಹೊಡೆಯಿತು.
ಈ ಗಾಸಿಪ್ ಗೆ ಇದೀಗ 'ರಾಜವೀರ ಮದಕರಿ ನಾಯಕ' ಚಿತ್ರದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸ್ಪಷ್ಟನೆ ಕೊಟ್ಟಿದ್ದಾರೆ.
ಏನಂತಾರೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು.?
''ಈ ಗಾಸಿಪ್ ಹೇಗೆ ಹಬ್ಬಿತೋ ಗೊತ್ತಿಲ್ಲ. ಆದ್ರೆ, ನಮ್ಮ ಚಿತ್ರಕ್ಕೆ ರಮ್ಯಾ ಅಂತೂ ನಾಯಕಿ ಅಲ್ಲ. ಇದು ಸುಳ್ಳು ಸುದ್ದಿ'' ಎಂದು 'ರಾಜವೀರ ಮದಕರಿ ನಾಯಕ' ಚಿತ್ರದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸ್ಪಷ್ಟನೆ ನೀಡಿದ್ದಾರೆ. ಅಲ್ಲಿಗೆ, 'ರಾಜವೀರ ಮದಕರಿ ನಾಯಕ' ಚಿತ್ರದ ಮೂಲಕ ರಮ್ಯಾ ವಾಪಸ್ ಆಗುತ್ತಾರೆ ಅಂತ ಖುಷಿ ಪಟ್ಟಿದ್ದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.
ದರ್ಶನ್ 'ಗಂಡುಗಲಿ ಮದಕರಿ ನಾಯಕ' ಚಿತ್ರಕ್ಕಾಗಿ ರಮ್ಯಾ ವಾಪಸ್?
ಹಾಗಾದ್ರೆ, ನಾಯಕಿ ಯಾರು.?
'ರಾಜವೀರ ಮದಕರಿ ನಾಯಕ' ಚಿತ್ರಕ್ಕೆ ನಾಯಕಿ ಇನ್ನೂ ಆಯ್ಕೆ ಆಗಿಲ್ಲ. ಚಿತ್ರತಂಡ ಇನ್ನೂ ಹೀರೋಯಿನ್ ಹುಡುಕಾಟದಲ್ಲಿ ತೊಡಗಿದೆ. ಜೊತೆಗೆ ತಾರಾಬಳಗವನ್ನು ಅಂತಿಮ ಮಾಡುವ ಕಾರ್ಯದಲ್ಲಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಬಿಜಿಯಾಗಿದ್ದಾರೆ.
ಗವಿ ಗಂಗಾಧರೇಶ್ವರ ಸನ್ನಿಧಿಯಲ್ಲಿ 'ಗಂಡುಗಲಿ ಮದಕರಿ ನಾಯಕ' ಮುಹೂರ್ತ
ಪ್ರಮುಖ ಪಾತ್ರದಲ್ಲಿ ನಟಿ ಸುಮಲತಾ.?
'ರಾಜವೀರ ಮದಕರಿ ನಾಯಕ' ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿ ಮತ್ತು ಸಂಸದೆ ಸುಮಲತಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ. ರಾಜಮಾತೆಯ ಪಾತ್ರದಲ್ಲಿ ನಟಿ ಸುಮಲತಾ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
'ಗಂಡುಗಲಿ ಮದಕರಿ ನಾಯಕ': ಆರಂಭದಲ್ಲೇ ಎಡವಟ್ಟು, ದರ್ಶನ್ ವಿರುದ್ಧ ಭುಗಿಲೆದ್ದ ಸಿಟ್ಟು.!
'ರಾಜವೀರ ಮದಕರಿ ನಾಯಕ' ಚಿತ್ರದ ಕುರಿತು
ರಾಜ ಮದಕರಿ ನಾಯಕ ಜೀವನ ಚರಿತ್ರೆ ಆಧರಿಸಿರುವ ಅಪ್ಪಟ ಐತಿಹಾಸಿಕ ಸಿನಿಮಾ 'ರಾಜವೀರ ಮದಕರಿ ನಾಯಕ'. ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ ರಾಕ್ ಲೈನ್ ವೆಂಕಟೇಶ್. ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಿದರೆ, ಹಂಸಲೇಖ ಸಂಗೀತ ಸಂಯೋಜಿಸಲಿದ್ದಾರೆ