Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- News
Photos: ಶಿವಮೊಗ್ಗದಲ್ಲಿ ಖ್ಯಾತ ಬಾಲಿವುಡ್ ನಟಿ ಜಾಕ್ವಲಿನ್ ಫರ್ನಾಂಡಿಸ್
- Automobiles
ಡಿಸೆಂಬರ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಮಹೀಂದ್ರಾ
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಮ್ಯಾ, ಜಗ್ಗೇಶ್ 'ನೀರ್ ದೋಸೆ'ಗೆ ಶೂಟಿಂಗ್ ಫಿಕ್ಸ್
ಈಗಾಗಲೆ ಮುಹೂರ್ತ ಮುಗಿಸಿಕೊಂಡಿರುವ 'ನೀರ್ ದೋಸೆ' ಚಿತ್ರಕ್ಕೆ ರಮ್ಯಾ ಮೊದಲು ನಾಯಕಿ ಎನ್ನಲಾಗಿತ್ತು. ಬಳಿಕ ಅವರು ಕಾರಣಾಂತರಗಳಿಂದ ನೀರ್ ದೋಸೆ ಬೇಡ ಎಂದಿದ್ದರು. ಸರಿ ನಿರ್ಮಾಪಕರು ವಿಧಿಯಿಲ್ಲದೆ ರಾಗಿಣಿ ದ್ವಿವೇದಿಯನ್ನು ಕರೆತರಲು ಮುಂದಾಗಿದ್ದರು.
ನೀರ್ ದೋಸೆ ಇನ್ನೇನು ರಾಗಿಣಿ ದ್ವಿವೇದಿ ಪಾಲಾಯಿತು ಎನ್ನುವ ಹೊತ್ತಿಗೆ ರಮ್ಯಾ ನಾನೇ ಅಭಿನಯಿಸುತ್ತೇನೆ ಎಂದರು. ಅಲ್ಲಿಗೆ ನೀರ್ ದೋಸೆಗೆ ರಮ್ಯಾ ಪಕ್ಕಾ ಆದರು. ಶೂಟಿಂಗ್ ಮಾರ್ಚ್ 15ಕ್ಕೆ ಆರಂಭವಾಗುತ್ತಿದ್ದರೂ ರಮ್ಯಾ ಭಾಗದ ಚಿತ್ರೀಕರಣ ಮಾರ್ಚ್ 23ರ ಬಳಿಕ ನಡೆಯಲಿದೆ.
ಇದಕ್ಕೂ ಮುನ್ನ ಮಾರ್ಚ್ 21ಕ್ಕೆ ಜಗ್ಗೇಶ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. 'ಸಿದ್ಲಿಂಗು' (ಚಿತ್ರ ವಿಮರ್ಶೆ ಓದಿ) ಚಿತ್ರವನ್ನು ನಿರ್ದೇಶಿಸಿದ್ದ ವಿಜಯಪ್ರಸಾದ್ ಚಿತ್ರದ ನಿರ್ದೇಶಕರು. ಬೆಂಗಳೂರು, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಚಿತ್ರದ ನಿರ್ಮಾಪಕ ಸುಧೀಂದ್ರ. ಚಿತ್ರದ ಪಾತ್ರವರ್ಗದಲ್ಲಿ ದತ್ತಣ್ಣ ಹಾಗೂ ಭಾವನಾ ಅವರು ಇದ್ದಾರೆ.
ಚಿತ್ರದಲ್ಲಿ ರಮ್ಯಾ ಅವರು ವೇಶ್ಯೆ ಪಾತ್ರ ಪೋಷಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಪಾತ್ರ ಮಾಡಿದರೆ ಎಲ್ಲಿ ತಮ್ಮ ಗೌರವಕ್ಕೆ ಧಕ್ಕೆ ಬರುತ್ತದೋ ಎಂದು ಭಾವಿಸಿದ್ದರಂತೆ. ಈಗ ಕಥೆಯಲ್ಲೂ ಒಂಚೂರು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆಯಂತೆ. ಈ ನೀರ್ ದೋಸೆ ಬಗ್ಗೆ ಒಂದು ಸಖತ್ ಮಜವಾದ ಕಥೆಯೊಂದಿಗೆ ಓದಿ. (ಒನ್ಇಂಡಿಯಾ ಕನ್ನಡ)