Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಂಸಾಹಾರ ತ್ಯಜಿಸಿದ ನಟಿ ರಮ್ಯಾ: ಕಾರಣವೇನು?
ಸ್ಯಾಂಡಲ್ ವುಡ್ ನ ಮೋಹಕತಾರೆ, ರಾಜಕಾರಣಿ ನಟಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಸುಮಾರು ಒಂದು ವರ್ಷದಿಂದ ಅಭಿಮಾನಿಗಳಿಂದ, ಸಾಮಾಜಿಕ ಜಾಲತಾಣದಿಂದ ಮಾಯವಾಗಿದ್ದ ರಮ್ಯಾ ಇದೀಗ ಮತ್ತೆ ಸಕ್ರೀಯರಾಗಿದ್ದಾರೆ.
ಸದಾ ಒಂದಲ್ಲೊಂದು ಪೋಸ್ಟ್ ಗಳನ್ನು ರಮ್ಯಾ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ರಮ್ಯಾ ಕಡೆಯಿಂದ ಬಂದ ಮಾಹಿತಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಹೌದು, ರಮ್ಯಾ ಸಂಪೂರ್ಣವಾಗಿ ಮಾಂಸಾಹಾರ ತ್ಯಜಿಸಿರುವುದಾಗಿ ಹೇಳಿದ್ದಾರೆ. ಇತ್ತೀಚಿಗೆ ಅನೇಕ ನಟಿಯರು ಮಾಂಸಾಹಾರ ತ್ಯಜಿಸಿದ್ದಾರೆ. ಸಸ್ಯಹಾರಿ ಆಗಿರುವ ಬಗ್ಗೆ ರಮ್ಯಾ ಬಹಿರಂಗ ಪಡಿಸಿದ್ದಾರೆ. ಮಾಂಸಾಹಾರ ತ್ಯಜಿಸುವುದು ಸುಲಭವಲ್ಲ ಆದರೂ ನಾನು ತ್ಯಜಿಸಿದ್ದೇನೆ ಎಂದು ಹೇಳಿದ್ದಾರೆ.
ಮಧ್ಯಾಹ್ನದ ಊಟ ತ್ಯಜಿಸಿ ರೈತರಿಗೆ ಬೆಂಬಲ ನೀಡಿದ ನಟಿ ರಮ್ಯಾ
ನಾನು ತೆಗೆದುಕೊಂಡ ಅತ್ಯುತ್ತಮ ನಿರ್ಧಾರವಿದು
ಮಾಂಸಾಹಾರ ತ್ಯಜಿಸಿರುವ ಬಗ್ಗೆ ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. 'ಈ ವರ್ಷದ ಆರಂಭದಲ್ಲಿ ನಾನು ಸಸ್ಯಹಾರಿಯಾಗಿ ಮಾರ್ಪಟ್ಟಿದ್ದೇನೆ. ಮತ್ತು ಇದು ನಾನು ತೆಗೆದುಕೊಂಡ ಅತ್ಯುತ್ತಮ ನಿರ್ಧಾರ. ಅನೇಕ ಕಾರಣಗಳಿಗಾಗಿ ನಿಮ್ಮ ದೇಹಕ್ಕೆ ಪ್ರೋಟೀನ್ ಬೇಕು. ಆದರೆ ನಾನು ಮಾಂಸಾಹಾರವಿಲ್ಲದೆ ಚೆನ್ನಾಗಿ ಇರುತ್ತೇನೆ.' ಎಂದಿದ್ದಾರೆ.
ಐಸ್ ಕ್ರೀಮ್ ತುಂಬಾ ಇಷ್ಟ ಪಡುತ್ತೇನೆ
'ನಾನು ಸಸ್ಯಹಾರದ ಬಗ್ಗೆ ಆಲೋಚಿಸುತ್ತೇನೆ. ಇದು ಕಷ್ಟ ಎನ್ನುವುದು ಗೊತ್ತು. ನಾನು ತುಂಬಾ ಇಷ್ಟ ಪಡುವ ಐಸ್ ಕ್ರೀಮ್ ಸೇರಿದಂತೆ ಬೇರೆ ಪರ್ಯಾಯಗಳಿವೆ ಎಂದು ನನಗೆ ತಿಳಿದಿದೆ. ನಾನು ನನ್ನ ಮನಸ್ಸನ್ನು ರೂಪಿಸಿಕೊಳ್ಳಬೇಕು.' ಎಂದು ಬರೆದುಕೊಂಡಿದ್ದಾರೆ. ಸ್ನೇಹಿತರ ಜೊತೆ ಹೋಟೆಲ್ ನಲ್ಲಿ ಕುಳಿತಿರುವ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಅಭಿಮಾನಿಗಳ ಮೆಚ್ಚುಗೆ
ರಮ್ಯಾ ನಿರ್ಧಾರಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರೈತ ದಿನಾಚರಣೆಯ ಅಂಗವಾಗಿ ರಮ್ಯಾ ಮಧ್ಯಾಹ್ನದ ಊಟ ತ್ಯಜಿಸಿ ರೈತರಿಗೆ ಬೆಂಬಲ ಸೂಚಿಸಿದ್ದು. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದ ಮೋಹಕತಾರೆ 'ಕಿಸಾನ್ ದಿವಸ್ ಆದ ಇಂದು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಮಧ್ಯಾಹ್ನದ ಊಟ ತ್ಯಜಿಸಿದ್ದೇನೆ' ಎಂದು ತಿಳಿಸಿದ್ದರು.
Recommended Video
ಮತ್ತೆ ಬಣ್ಣದ ಲೋಕಕ್ಕೆ ಬರ್ತಾರಾ?
ರಮ್ಯಾ ಸದ್ಯ ಸಿನಿಮಾ ಮತ್ತು ರಾಜಕೀಯ ಎರಡರಿಂದನೂ ದೂರ ಸರಿದಿದ್ದಾರೆ. ಮತ್ತೆ ಸಿನಿಮಾರಂಗಕ್ಕೆ ವಾಪಸ್ ಆಗುತ್ತಾರೆ ಎನ್ನುವ ಮಾತುಗಳು ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ರಮ್ಯಾ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೆ ರಮ್ಯಾ ಬಣ್ಣ ಹಚ್ಚಲಿ, ಸಿನಿಮಾದಲ್ಲಿ ಮಿಂಚಲಿ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.