Just In
Don't Miss!
- News
ನಮ್ಮನ್ನು ಬಿಟ್ಟು ಓಡುತ್ತಿವೆ 500 ನಕ್ಷತ್ರಗಳು, ವಿಜ್ಞಾನಿಗಳಿಂದ ರಹಸ್ಯ ರಿವೀಲ್..!
- Lifestyle
"ಗುರುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುದೀಪ್ ಮಾಡಬೇಕಿದ್ದ ಈ ಪಾತ್ರಕ್ಕೆ ರಾಣಾ ದಗ್ಗುಬಾಟಿ ಎಂಟ್ರಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮಾಡಬೇಕಿದ್ದ ಪಾತ್ರ ಈಗ ರಾಣಾ ದಗ್ಗುಬಾಟಿ ಪಾಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದಾರೆ ಕಿಚ್ಚ, ಪವನ್ ಕಲ್ಯಾಣ್ ಜೊತೆ ತೆರೆಹಂಚಿಕೊಳ್ಳಬೇಕಿತ್ತು. ಆದರೀಗ ಸುದೀಪ್ ಬದಲಿಗೆ ರಾಣಾ ನಟಿಸುತ್ತಿದ್ದಾರೆ.
ಹೌದು, ಮಲಯಾಳಂ ಸೂಪರ್ ಹಿಟ್ ಅಯ್ಯಪ್ಪನುಂ ಕೋಶಿಯುಂ ಚಿತ್ರ ತೆಲುಗಿಗೆ ರಿಮೇಕ್ ಆಗುತ್ತಿದೆ. ಈಗಾಗಲೇ ಚಿತ್ರದ ಮುಹೂರ್ತ ನರೆವೇರಿದ್ದು, ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟಿಸುವುದು ಅಧಿಕೃತವಾಗಿದೆ. ಅಂದಹಾಗೆ ಈ ಸಿನಿಮಾ ತೆಲುಗಿಗೆ ರಿಮೇಕ್ ಆಗುತ್ತೆ ಎನ್ನುವ ಸುದ್ದಿ ಅನೇಕ ತಿಂಗಳಿಂದ ಕೇಳಿಬರುತ್ತಿತ್ತು. ಪವನ್ ಕಲ್ಯಾಣ್ ನಟಿಸುವುದು ಬಹುತೇಕ ಖಚಿತವಾಗಿತ್ತು. ಆದರೆ ರಾಣಾ ದಗ್ಗುಬಾಟಿ ಮಾಡುತ್ತಿರುವ ಪಾತ್ರಕ್ಕೆ ಸಾಕಷ್ಟು ಹೆಸರುಗಳು ಕೇಳಿಬರುತ್ತಿತ್ತು. ವಿಶೇಷ ಎಂದರೇ ಈ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಮುಂದೆ ಓದಿ..
ಅಧಿಕೃತ: ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ಸಿನಿಮಾ ಘೋಷಣೆ

ಅಯ್ಯಪ್ಪನುಂ ಕೋಶಿಯುಂನಲ್ಲಿ ಸುದೀಪ್ ನಟಿಸಬೇಕಿತ್ತು
ಕಿಚ್ಚ ಸುದೀಪ್, ಪವನ್ ಕಲ್ಯಾಣ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ, ಅಯ್ಯಪ್ಪನುಂ ಕೋಶಿಯುಂ ಚಿತ್ರದ ರಿಮೇಕ್ ನಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೆಲವು ತಿಂಗಳ ಹಿಂದೆ ಕೇಳಿಬರುತ್ತಿತ್ತು. ಮೂಲಗಳ ಪ್ರಕಾರ ಈ ಪಾತ್ರಕ್ಕೆ ಸುದೀಪ್ ಅವರಿಗೆ ಆಫರ್ ಮಾಡಲಾಗಿತಂತೆ. ಆದರೆ ಕಾರಣಾಂತರಗಳಿಂದ ಸುದೀಪ್ ಈ ಸಿನಿಮಾದ ಭಾಗವಾಗಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಪೃಥ್ವಿರಾಜ್ ಪಾತ್ರದಲ್ಲಿ ರಾಣಾ ದಗ್ಗುಬಾಟಿ
ಮಲಯಾಳಂನ ಅಯ್ಯಪ್ಪನಂ ಕೋಶಿಯುಂ ಚಿತ್ರದಲ್ಲಿ ಬಿಜು ಮೆನನ್ ಮಾಡಿದ್ದ ಪಾತ್ರವನ್ನು ಪವನ್ ಕಲ್ಯಾಣ್ ಮಾಡುತ್ತಿದ್ದಾರೆ. ಪೃಥ್ವರಾಜ್ ಪಾತ್ರಕ್ಕೆ ಕಿಚ್ಚನ ಹೆಸರು ಕೇಳಿಬಂದಿತ್ತು, ಆದರೀಗ ಈ ಪಾತ್ರ ರಾಣಾ ದಗ್ಗುಬಾಟಿ ಪಾಲಾಗಿದೆ.

ಕೆ. ಚಂದ್ರ ನಿರ್ದೇಶನ
ಈ ಸಿನಿಮಾಗೆ ಸಾಗರ್ ಕೆ ಚಂದ್ರ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಸೂರ್ಯದೇವರ ನಾಗ ವಂಶಿ ನಿರ್ಮಾಣ ಮಾಡುತ್ತಿದ್ದಾರೆ. ಅಧಿಕೃತವಾಗಿ ಈ ಚಿತ್ರದ ಮುಹೂರ್ತ ನಿನ್ನೆ (ಡಿಸೆಂಬರ್ 21) ನೆರವೇರಿದ್ದು, ಪವನ್ ಕಲ್ಯಾಣ್ ಮಾತ್ರ ಭಾಗಿಯಾಗಿದ್ದರು. ತಮನ್ ಎಸ್ ಸಂಗೀತ ಹಾಗೂ ನವೀನ್ ನೂಲಿ ಸಂಕಲನ ಇದೆ. ಪ್ರಸಾದ್ ಮುರೆಲ್ಲ ಅವರ ಛಾಯಾಗ್ರಹಣ ಹೊಂದಿದೆ.
ಸಾಯಿ ಪಲ್ಲವಿಗೆ ಬಂಫರ್ ಆಫರ್: ಒಪ್ಪಿಕೊಳ್ಳುತ್ತಾರೋ ಇಲ್ಲವೋ?

ಸಾಯಿ ಪಲ್ಲವಿ ನಾಯಕಿ ಸಾಧ್ಯತೆ?
ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ಸಿನಿಮಾ ಅಂದ್ಮೇಲೆ ಈ ಪ್ರಾಜೆಕ್ಟ್ ಮೇಲೆ ಭಾರಿ ನಿರೀಕ್ಷೆ ಹುಟ್ಟಿಕೊಂಡಿದೆ. ಅಂದ್ಹಾಗೆ, ಪವನ್ ಕಲ್ಯಾಣ್ಗೆ ಜೋಡಿಯಾಗಿ ಸಾಯಿ ಪಲ್ಲವಿ ಅವರನ್ನು ಕರೆತರಲು ಚಿತ್ರತಂಡ ಪ್ಲಾನ್ ಮಾಡಿದೆಯಂತೆ. ಈ ಕುರಿತು ಸುದ್ದಿ ಸಹ ಆಗಿತ್ತು. ಆದ್ರೆ, ಅಧಿಕೃತ ಮಾಡಿಲ್ಲ.